Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿ ಪೂರ್ಣಗೊಳಿಸಿ, ಕೇಂದ್ರ ಸಚಿವರಿಂದ ಉದ್ಘಾಟಿಸಿ : ಟಿ. ಪ್ರಕಾಶ್ ಮನವಿ

---Advertisement---

 

ವರದಿ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಗೊಡಬನಹಾಳ್ ಗ್ರಾಮದ ಹತ್ತಿರ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ 2011-12 ರಲ್ಲಿ ಸರ್ಕಾರ ಮಂಜೂರು ಮಾಡಿದ್ದು, ಹತ್ತು ವರ್ಷಗಳ ನಂತರ ಕಾಮಗಾರಿಯು ಶೇ.80 ರಷ್ಟು ಪೂರ್ಣಗೊಂಡಿದ್ದು, ಮುಗಿಯುವ ಹಂತಕ್ಕೆ ತಲುಪಿದೆ.

ಇದಕ್ಕಾಗಿ 12 ಕೋಟಿ ರೂ.ಗಳ ವೆಚ್ಚವಾಗಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿರವರು ಕಾಮಗಾರಿಯನ್ನು ನಿಲ್ಲಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದಾರೆಂದು ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅಪಾರ ಕಾಳಜಿಯಿಟ್ಟುಕೊಂಡಿರುವ ಎ.ನಾರಾಯಣಸ್ವಾಮಿರವರು ಕಾಮಗಾರಿಯನ್ನು ನಿಲ್ಲಿಸುವ ಕೆಲಸಕ್ಕೆ ಕೈಹಾಕುವವರಲ್ಲ.

ಅಧಿಕಾರಿಗಳು ಯಾವುದೇ ಭಯವಿಲ್ಲದೆ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಯನ್ನು ಪೂರ್ಣಗೊಳಿಸಿ ಕೇಂದ್ರ ಸಚಿವರಿಂದಲೇ ಉದ್ಘಾಟಿಸಬೇಕೆಂದು ಭಾರತೀಯ ಜನತಾಪಕ್ಷ ಅನ್ನೇಹಾಳ್ ಮಂಡಲ ಅಧ್ಯಕ್ಷ ಟಿ.ಪ್ರಕಾಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲೇಶ್, ನಿರಂಜನಮೂರ್ತಿ, ಕಾಂತರಾಜ್ ಇವರುಗಳು ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...