Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪದವಿ ಶಿಕ್ಷಣದ ಜೊತೆ ಕಂಪ್ಯೂಟರ್ ಶಿಕ್ಷಣ ಅಗತ್ಯ : ಬಸವರಾಜಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.21): ಪದವಿ ಜೊತೆಗೆ ಕೌಶಲ್ಯ ಶಿಕ್ಷಣ ಕಲಿತಾಗ ಮಾತ್ರ ಬದುಕಿಗೆ ಉಪಯೋಗವಾಗಲಿದೆ ಎಂದು ಎಸ್.ಜೆ.ಎಂ. ಮಹಿಳಾ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಬಸವರಾಜಪ್ಪ ವಿದ್ಯಾರ್ಥಿಗಳಿಗೆ ತಿಳಿಸಿದರು.

ನೆಹರು ಯುವ ಕೇಂದ್ರ, ಪ್ರಿಯದರ್ಶಿನಿ ಮಹಿಳಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಬಸವೇಶ್ವರ ಟಾಕೀಸ್ ಸಮೀಪವಿರುವ ಸಿಲಿಕಾನ್ ಇನ್ಸ್‍ಟಿಟ್ಯುಟ್ ಆಫ್ ಟೆಕ್ನಾಲಜಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ಉದ್ಗಾಟಿಸಿ ಮಾತನಾಡಿದರು.

ಎಲ್ಲಾ ಕ್ಷೇತ್ರವು ಕಂಪ್ಯೂಟರೀಕರಣವಾಗಿರುವುದರಿಂದ ಶಿಕ್ಷಣದ ಜೊತೆ ಕಂಪ್ಯೂಟರ್ ಅಗತ್ಯವಾಗಿ ಕಲಿಯಬೇಕಿದೆ. ದೇಶ ತಾಂತ್ರಿಕತೆಯಲ್ಲಿ ಮುಂದುವರೆಯುತ್ತಿದೆ. ಶಿಕ್ಷಣಕ್ಕೆ ತಕ್ಕಂತೆ ಕೆಲಸಗಳು ಸಿಗುವುದು ಕಷ್ಟ. ಸೆಮಿಸ್ಟರ್ ಪದ್ದತಿಯಿಂದ ಗುಣಾತ್ಮಕ ಶಿಕ್ಷಣ ಕಡಿಮೆಯಾಗುತ್ತಿದೆ. ಎಲ್ಲಾ ವಿಷಯಗಳನ್ನು ತಿಳಿದುಕೊಳ್ಳಲು ಸಮಯದ ಅಭಾವವಿದೆ. ಮಕ್ಕಳ ಭವಿಷ್ಯಕ್ಕಿಂತ ಮುಖ್ಯವಾಗಿ ಬೇಗನೆ ಪರೀಕ್ಷೆಯನ್ನು ಮುಗಿಸಬೇಕೆಂಬ ಆತುರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿದ್ದಾರೆ. ಹಾಗಾಗಿ ಸ್ಪರ್ಧಾತ್ಮಕ ವಿಷಯಗಳಲ್ಲಿ ಮಕ್ಕಳು ತೇರ್ಗಡೆಯಾಗುವುದು ಕಷ್ಟವಾಗಿದೆ ಎಂದು ಹೇಳಿದರು.

ವಿಷಯದ ಆಳ ಮಕ್ಕಳಲ್ಲಿ ಇಲ್ಲ. ಶಿಕ್ಷಣದ ನಂತರ ಉದ್ಯೋಗಕ್ಕೆ ತೊಡಗಿಸಿಕೊಳ್ಳಬೇಕಾದರೆ ಕಂಪ್ಯೂಟರ್ ಜ್ಞಾನ ಇರಲೇಬೇಕು. ಕಾಟಾಚಾರಕ್ಕೆ ಯಾವುದನ್ನೂ ಕಲಿಯಬೇಡಿ. ಶ್ರದ್ದೆಯಿಟ್ಟು ತರಬೇತಿಯಲ್ಲಿ ಪಾಲ್ಗೊಳ್ಳಿ ಎಂದರು.

ಕಂಪ್ಯೂಟರ್ ತರಬೇತುದಾರ ಜಾವಿದ್ ಮಾತನಾಡಿ ಪದವಿಯ ಜೊತೆ ಕೌಶಲ್ಯ ಬೇಕೆ ಬೇಕು. ಯಾವುದೇ ವಿಚಾರದಲ್ಲಾಗಲಿ ನಕಾರಾತ್ಮಕ ಆಲೋಚನೆಗಳನ್ನು ತಲೆಯಲ್ಲಿಟ್ಟುಕೊಳ್ಳಬಾರದು. ಜಾತಿ ಬೇಧ, ಕಲರ್‍ನಿಂದ ಜೀವನದಲ್ಲಿ ಮುಂದೆ ಬರಬೇಕಾಗಿಲ್ಲ. ಪ್ರತಿಭೆ, ಜ್ಞಾನ, ಕೌಶಲ್ಯದಿಂದ ಮಾತ್ರ ಬದುಕು ಕಟ್ಟಿಕೊಳ್ಳಬಹುದು. ಒಂದೆ ವಿಷಯಕ್ಕೆ ಸೀಮಿತವಾಗಿರಬಾರದು. ಕಲಿಕೆ ನಿರಂತರವಾಗಿರಬೇಕು. ಕಷ್ಟಪಟ್ಟು ಪರಿಶ್ರಮದಿಂದ ಕೆಲಸ ಮಾಡಿದಾಗ ಮಾತ್ರ ಹಣ ಮತ್ತು ಒಳ್ಳೆಯ ಹೆಸರು ಸಂಪಾದಿಸಬಹುದು. ಅನುಭವ ಮುಖ್ಯ. ಮೊದಲು ಆತ್ಮವಿಶ್ವಾಸ ಬೆಳೆಸಿಕೊಳ್ಳಿ ಎಂದು ಕಂಪ್ಯೂಟರ್ ತರಬೇತುದಾರರಿಗೆ ತಿಳಿಸಿದರು.

ಸಿಲಿಕಾನ್ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥ ಡಿ.ಗೋಪಾಲಸ್ವಾಮಿ ನಾಯಕ, ವ್ಯವಸ್ಥಾಪಕ ಸೋಮಶೇಖರ್ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

error: Content is protected !!