ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಜ.21): ಪದವಿ ಜೊತೆಗೆ ಕೌಶಲ್ಯ ಶಿಕ್ಷಣ ಕಲಿತಾಗ ಮಾತ್ರ ಬದುಕಿಗೆ ಉಪಯೋಗವಾಗಲಿದೆ ಎಂದು ಎಸ್.ಜೆ.ಎಂ. ಮಹಿಳಾ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಬಸವರಾಜಪ್ಪ ವಿದ್ಯಾರ್ಥಿಗಳಿಗೆ ತಿಳಿಸಿದರು.
ನೆಹರು ಯುವ ಕೇಂದ್ರ, ಪ್ರಿಯದರ್ಶಿನಿ ಮಹಿಳಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಬಸವೇಶ್ವರ ಟಾಕೀಸ್ ಸಮೀಪವಿರುವ ಸಿಲಿಕಾನ್ ಇನ್ಸ್ಟಿಟ್ಯುಟ್ ಆಫ್ ಟೆಕ್ನಾಲಜಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ಉದ್ಗಾಟಿಸಿ ಮಾತನಾಡಿದರು.
ಎಲ್ಲಾ ಕ್ಷೇತ್ರವು ಕಂಪ್ಯೂಟರೀಕರಣವಾಗಿರುವುದರಿಂದ ಶಿಕ್ಷಣದ ಜೊತೆ ಕಂಪ್ಯೂಟರ್ ಅಗತ್ಯವಾಗಿ ಕಲಿಯಬೇಕಿದೆ. ದೇಶ ತಾಂತ್ರಿಕತೆಯಲ್ಲಿ ಮುಂದುವರೆಯುತ್ತಿದೆ. ಶಿಕ್ಷಣಕ್ಕೆ ತಕ್ಕಂತೆ ಕೆಲಸಗಳು ಸಿಗುವುದು ಕಷ್ಟ. ಸೆಮಿಸ್ಟರ್ ಪದ್ದತಿಯಿಂದ ಗುಣಾತ್ಮಕ ಶಿಕ್ಷಣ ಕಡಿಮೆಯಾಗುತ್ತಿದೆ. ಎಲ್ಲಾ ವಿಷಯಗಳನ್ನು ತಿಳಿದುಕೊಳ್ಳಲು ಸಮಯದ ಅಭಾವವಿದೆ. ಮಕ್ಕಳ ಭವಿಷ್ಯಕ್ಕಿಂತ ಮುಖ್ಯವಾಗಿ ಬೇಗನೆ ಪರೀಕ್ಷೆಯನ್ನು ಮುಗಿಸಬೇಕೆಂಬ ಆತುರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿದ್ದಾರೆ. ಹಾಗಾಗಿ ಸ್ಪರ್ಧಾತ್ಮಕ ವಿಷಯಗಳಲ್ಲಿ ಮಕ್ಕಳು ತೇರ್ಗಡೆಯಾಗುವುದು ಕಷ್ಟವಾಗಿದೆ ಎಂದು ಹೇಳಿದರು.
ವಿಷಯದ ಆಳ ಮಕ್ಕಳಲ್ಲಿ ಇಲ್ಲ. ಶಿಕ್ಷಣದ ನಂತರ ಉದ್ಯೋಗಕ್ಕೆ ತೊಡಗಿಸಿಕೊಳ್ಳಬೇಕಾದರೆ ಕಂಪ್ಯೂಟರ್ ಜ್ಞಾನ ಇರಲೇಬೇಕು. ಕಾಟಾಚಾರಕ್ಕೆ ಯಾವುದನ್ನೂ ಕಲಿಯಬೇಡಿ. ಶ್ರದ್ದೆಯಿಟ್ಟು ತರಬೇತಿಯಲ್ಲಿ ಪಾಲ್ಗೊಳ್ಳಿ ಎಂದರು.
ಕಂಪ್ಯೂಟರ್ ತರಬೇತುದಾರ ಜಾವಿದ್ ಮಾತನಾಡಿ ಪದವಿಯ ಜೊತೆ ಕೌಶಲ್ಯ ಬೇಕೆ ಬೇಕು. ಯಾವುದೇ ವಿಚಾರದಲ್ಲಾಗಲಿ ನಕಾರಾತ್ಮಕ ಆಲೋಚನೆಗಳನ್ನು ತಲೆಯಲ್ಲಿಟ್ಟುಕೊಳ್ಳಬಾರದು. ಜಾತಿ ಬೇಧ, ಕಲರ್ನಿಂದ ಜೀವನದಲ್ಲಿ ಮುಂದೆ ಬರಬೇಕಾಗಿಲ್ಲ. ಪ್ರತಿಭೆ, ಜ್ಞಾನ, ಕೌಶಲ್ಯದಿಂದ ಮಾತ್ರ ಬದುಕು ಕಟ್ಟಿಕೊಳ್ಳಬಹುದು. ಒಂದೆ ವಿಷಯಕ್ಕೆ ಸೀಮಿತವಾಗಿರಬಾರದು. ಕಲಿಕೆ ನಿರಂತರವಾಗಿರಬೇಕು. ಕಷ್ಟಪಟ್ಟು ಪರಿಶ್ರಮದಿಂದ ಕೆಲಸ ಮಾಡಿದಾಗ ಮಾತ್ರ ಹಣ ಮತ್ತು ಒಳ್ಳೆಯ ಹೆಸರು ಸಂಪಾದಿಸಬಹುದು. ಅನುಭವ ಮುಖ್ಯ. ಮೊದಲು ಆತ್ಮವಿಶ್ವಾಸ ಬೆಳೆಸಿಕೊಳ್ಳಿ ಎಂದು ಕಂಪ್ಯೂಟರ್ ತರಬೇತುದಾರರಿಗೆ ತಿಳಿಸಿದರು.
ಸಿಲಿಕಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥ ಡಿ.ಗೋಪಾಲಸ್ವಾಮಿ ನಾಯಕ, ವ್ಯವಸ್ಥಾಪಕ ಸೋಮಶೇಖರ್ ವೇದಿಕೆಯಲ್ಲಿದ್ದರು.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…