ಪದವಿ ಶಿಕ್ಷಣದ ಜೊತೆ ಕಂಪ್ಯೂಟರ್ ಶಿಕ್ಷಣ ಅಗತ್ಯ : ಬಸವರಾಜಪ್ಪ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.21): ಪದವಿ ಜೊತೆಗೆ ಕೌಶಲ್ಯ ಶಿಕ್ಷಣ ಕಲಿತಾಗ ಮಾತ್ರ ಬದುಕಿಗೆ ಉಪಯೋಗವಾಗಲಿದೆ ಎಂದು ಎಸ್.ಜೆ.ಎಂ. ಮಹಿಳಾ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಬಸವರಾಜಪ್ಪ ವಿದ್ಯಾರ್ಥಿಗಳಿಗೆ ತಿಳಿಸಿದರು.

ನೆಹರು ಯುವ ಕೇಂದ್ರ, ಪ್ರಿಯದರ್ಶಿನಿ ಮಹಿಳಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಬಸವೇಶ್ವರ ಟಾಕೀಸ್ ಸಮೀಪವಿರುವ ಸಿಲಿಕಾನ್ ಇನ್ಸ್‍ಟಿಟ್ಯುಟ್ ಆಫ್ ಟೆಕ್ನಾಲಜಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಬೇಸಿಕ್ ಕಂಪ್ಯೂಟರ್ ತರಬೇತಿಯನ್ನು ಉದ್ಗಾಟಿಸಿ ಮಾತನಾಡಿದರು.

ಎಲ್ಲಾ ಕ್ಷೇತ್ರವು ಕಂಪ್ಯೂಟರೀಕರಣವಾಗಿರುವುದರಿಂದ ಶಿಕ್ಷಣದ ಜೊತೆ ಕಂಪ್ಯೂಟರ್ ಅಗತ್ಯವಾಗಿ ಕಲಿಯಬೇಕಿದೆ. ದೇಶ ತಾಂತ್ರಿಕತೆಯಲ್ಲಿ ಮುಂದುವರೆಯುತ್ತಿದೆ. ಶಿಕ್ಷಣಕ್ಕೆ ತಕ್ಕಂತೆ ಕೆಲಸಗಳು ಸಿಗುವುದು ಕಷ್ಟ. ಸೆಮಿಸ್ಟರ್ ಪದ್ದತಿಯಿಂದ ಗುಣಾತ್ಮಕ ಶಿಕ್ಷಣ ಕಡಿಮೆಯಾಗುತ್ತಿದೆ. ಎಲ್ಲಾ ವಿಷಯಗಳನ್ನು ತಿಳಿದುಕೊಳ್ಳಲು ಸಮಯದ ಅಭಾವವಿದೆ. ಮಕ್ಕಳ ಭವಿಷ್ಯಕ್ಕಿಂತ ಮುಖ್ಯವಾಗಿ ಬೇಗನೆ ಪರೀಕ್ಷೆಯನ್ನು ಮುಗಿಸಬೇಕೆಂಬ ಆತುರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿದ್ದಾರೆ. ಹಾಗಾಗಿ ಸ್ಪರ್ಧಾತ್ಮಕ ವಿಷಯಗಳಲ್ಲಿ ಮಕ್ಕಳು ತೇರ್ಗಡೆಯಾಗುವುದು ಕಷ್ಟವಾಗಿದೆ ಎಂದು ಹೇಳಿದರು.

ವಿಷಯದ ಆಳ ಮಕ್ಕಳಲ್ಲಿ ಇಲ್ಲ. ಶಿಕ್ಷಣದ ನಂತರ ಉದ್ಯೋಗಕ್ಕೆ ತೊಡಗಿಸಿಕೊಳ್ಳಬೇಕಾದರೆ ಕಂಪ್ಯೂಟರ್ ಜ್ಞಾನ ಇರಲೇಬೇಕು. ಕಾಟಾಚಾರಕ್ಕೆ ಯಾವುದನ್ನೂ ಕಲಿಯಬೇಡಿ. ಶ್ರದ್ದೆಯಿಟ್ಟು ತರಬೇತಿಯಲ್ಲಿ ಪಾಲ್ಗೊಳ್ಳಿ ಎಂದರು.

ಕಂಪ್ಯೂಟರ್ ತರಬೇತುದಾರ ಜಾವಿದ್ ಮಾತನಾಡಿ ಪದವಿಯ ಜೊತೆ ಕೌಶಲ್ಯ ಬೇಕೆ ಬೇಕು. ಯಾವುದೇ ವಿಚಾರದಲ್ಲಾಗಲಿ ನಕಾರಾತ್ಮಕ ಆಲೋಚನೆಗಳನ್ನು ತಲೆಯಲ್ಲಿಟ್ಟುಕೊಳ್ಳಬಾರದು. ಜಾತಿ ಬೇಧ, ಕಲರ್‍ನಿಂದ ಜೀವನದಲ್ಲಿ ಮುಂದೆ ಬರಬೇಕಾಗಿಲ್ಲ. ಪ್ರತಿಭೆ, ಜ್ಞಾನ, ಕೌಶಲ್ಯದಿಂದ ಮಾತ್ರ ಬದುಕು ಕಟ್ಟಿಕೊಳ್ಳಬಹುದು. ಒಂದೆ ವಿಷಯಕ್ಕೆ ಸೀಮಿತವಾಗಿರಬಾರದು. ಕಲಿಕೆ ನಿರಂತರವಾಗಿರಬೇಕು. ಕಷ್ಟಪಟ್ಟು ಪರಿಶ್ರಮದಿಂದ ಕೆಲಸ ಮಾಡಿದಾಗ ಮಾತ್ರ ಹಣ ಮತ್ತು ಒಳ್ಳೆಯ ಹೆಸರು ಸಂಪಾದಿಸಬಹುದು. ಅನುಭವ ಮುಖ್ಯ. ಮೊದಲು ಆತ್ಮವಿಶ್ವಾಸ ಬೆಳೆಸಿಕೊಳ್ಳಿ ಎಂದು ಕಂಪ್ಯೂಟರ್ ತರಬೇತುದಾರರಿಗೆ ತಿಳಿಸಿದರು.

ಸಿಲಿಕಾನ್ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥ ಡಿ.ಗೋಪಾಲಸ್ವಾಮಿ ನಾಯಕ, ವ್ಯವಸ್ಥಾಪಕ ಸೋಮಶೇಖರ್ ವೇದಿಕೆಯಲ್ಲಿದ್ದರು.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

20 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

57 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago