Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುಸ್ಲಿಂರಿಗೆ ಸಿಗುತ್ತಿದ್ದ ಮೀಸಲಾತಿ ರದ್ದಿಗೆ ತೀರ್ಮಾನ : 2B ಮೀಸಲಾತಿಯಲ್ಲಿ ಏನೆಲ್ಲಾ ಸೌಲಭ್ಯವಿತ್ತು..?

---Advertisement---

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕೊನೆಯ ಕ್ಯಾಬಿನೆಟ್ ಮೀಟಿಂಗ್ ನಡೆದಿದೆ. ಈ ಸಭೆಯಲ್ಲಿ ಒಂದಷ್ಟು ಮಹತ್ತರವಾದ ತೀರ್ಮಾನವನ್ನು ಸಿಎಂ ಬೊಮ್ಮಾಯಿ ಅವರು ಕೈಗೊಂಡಿದ್ದಾರೆ. ಅದರಲ್ಲೂ SC/ST ಇನ್ನರ್ ರಿಸರ್ವೇಶನ್ ಸೇರಿದಂತೆ ಅದರಲ್ಲೂ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಂತ ಪಂಚಮಸಾಲಿ, ಒಕ್ಕಲಿಗ ಸಮುದಾಯದ ಮೀಸಲಾತಿ ವಿಚಾರಕ್ಕೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದರ ಜೊತೆಗೆ ಮುಸ್ಲಿಂರಿಗೆ ಇದ್ದಂತ 2B ಮೀಸಲಾತಿಯನ್ನು ರದ್ದು ಮಾಡುವ ನಿರ್ಧಾರವನ್ನು ಸರ್ಕಾರ ಮಾಡಿದೆ ಎನ್ನಲಾಗಿದೆ. ಬಹುತೇಕ ಇದು ಖಚಿತವಾದಂತೆ ಇದೆ. ಇದು ಮುಸ್ಲಿಂರಿಗೆ ಬಾರೀ ಆಘಾತ ಉಂಟು ಮಾಡಿದೆ. ಈ ಹಿಂದೆಯೇ ರಾಜ್ಯ ಸರ್ಕಾರ ನೇಮಿಸಿದ್ದ ಹಿಂದುಳಿದ ವರ್ಗಗಳ ಎಲ್ಲಾ ಆಯೋಗಗಳು ಮುಸ್ಲಿಂರನ್ನು ತೀವ್ರ ಹಿಂದುಳಿದ ಸಮುದಾಯ ಎಂದು ಗುರತಿಸಿದ್ದವು.

ಕಾಂತರಾಜು ಆಯೋಗವೂ ಮುಸ್ಲಿಂ ಜನಸಂಖ್ಯೆ ಬಗ್ಗೆ ಮಾಹಿತಿ ನೀಡಿತ್ತು. ಮುಸ್ಲಿಂರ ಜನಸಂಖ್ಯೆ ಶೇ. 16ರಷ್ಟಿದೆ ಎಂದು ವರದಿ ತಿಳಿಸಿತ್ತು. ಅಲ್ಲದೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿಯನ್ನು ಹೆಚ್ಚಿಸಬೇಕೆಂಬ ಒತ್ತಾಯ ಕೇಳಿ ಬಂದಿತ್ತು. 2B ಮೀಸಲಾತಿಯಡಿಯಲ್ಲಿ ಶೇ.4 ಇದೆ. ಇದರಿಂದ 8ಕ್ಕೆ ಏರಿಕೆ ಮಾಡಬೇಕೆಂದು ಹೇಳಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...