Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತಮ ರೀತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸಿ : ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಸೂಚನೆ

Facebook
Twitter
Telegram
WhatsApp

ಉತ್ತಮ ರೀತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸಿ :
ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಸೂಚನೆ

Conduct Elections in a Better Way: District Election Officer T. Venkatesh notice

 

ಚಿತ್ರದುರ್ಗ, ಏ.08: ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ತಮಗೆ ವಹಿಸಿದ ಚುನಾವಣಾ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಿ ಚುನಾವಣೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಮತಗಟ್ಟೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಇಲ್ಲಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾನುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ  ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಚುನಾವಣಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆ ಕೆಲಸ ಕಾರ್ಯಗಳ ಬಗ್ಗೆ ಯಾವುದೇ ಗೊಂದಲ ಇಲ್ಲದೆ, ತರಬೇತಿಯಲ್ಲಿ ತಮ್ಮ ಗೊಂದಲಗಳನ್ನು ಬಗೆಹರಿಸಿಕೊಂಡು ಮತಗಟ್ಟೆಗಳಿಗೆ ತೆರಳಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ಜಿಲ್ಲಾ ತರಬೇತಿ ನೋಡಲ್ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಸೆಕ್ಟರ್ ಅಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಇದ್ದರು.

ಅಂಚೆ ಮತದಾನ ಕೇಂದ್ರ ಸ್ಥಾಪನೆ :
ಏಪ್ರಿಲ್ 8 ರಿಂದ ಅನ್ವಯವಾಗುವಂತೆ ಅಂಚೆ ಮತದಾನ ಕೇಂದ್ರ (ಪೋಸ್ಟಲ್ ವೋಟಿಂಗ್ ಸೆಂಟರ್)ವನ್ನು ನಗರದ ತಹಶೀಲ್ದಾರ್ ಕಚೇರಿಯಲ್ಲಿರುವ ಚಿತ್ರದುರ್ಗ-99 ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂಧ ಕರ್ತವ್ಯ ನಿರತ ಗೈರು ಹಾಜರಿ ಮತದಾರರು ಇದೇ ಏಪ್ರಿಲ್ 19 ರಿಂದ 21 ರ ವರೆಗೆ  ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ಒಳಗೆ ಪೋಸ್ಟಲ್ ವೋಟಿಂಗ್ ಸೆಂಟರ್‍ಗೆ ಆಗಮಿಸಿ ತಮ್ಮ ಮತ ಚಲಾಯಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!