Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

IT ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಆತ್ಮಹತ್ಯೆ..!

---Advertisement---

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ ಮನ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಇಡೀ ರಾಜ್ಯಕ್ಕೆ ಶಾಕಿಂಗ್ ನ್ಯೂಸ್ ಎನಿಸಿದೆ. ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹತ್ತಾರು ರಿಯಲ್ ಎಸ್ಟೇಟ್ ಪ್ರಾಜೆಕ್ಟ್ ಗಳನ್ನು ಯಶಸ್ವಿಯಾಗಿ ಮಾಡಿದ್ದಾರೆ. ಇತ್ತೀಚೆಗೆ ಕಾನ್ಫಿಡೆಂಟ್ ಗ್ರೂಪ್ ಹಾಗೂ ಸಿಜೆ ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿಯಿಂದ ಸಿ.ಜೆ.ರಾಯ್ ಕಂಗಲಾಗಿದ್ದರು. ಆದಾಯ ತೆರಿಗೆ ವಂಚನೆಯ ಹಿನ್ನಲೆಯಲ್ಲಿ ಐಟಿ ದಾಳಿ ನಡೆದಿತ್ತು. ಇಂದು ಕೂಎ ಸಿ.ಜೆ.ರಾಯ್ ಹಾಗೂ ಕಾನ್ಫಿಡೆಂಟ್ ಗ್ರೂಪ್ ಮೇಲೆ ಐಟಿ ದಾಳಿ ನಡೆದಿತ್ತು. ಸಿ.ಜೆ.ರಾಯ್ ಸಾವಿರಾರು ಕೋಟಿ ಒಡೆಯರಾಗಿದ್ದರು. ಬಡವರಿಗೆ ದಾನ – ಧರ್ಮ ಕೂಡ ಮಾಡುತ್ತಿದ್ದರು.

ಇತ್ತೀಚೆಗೆ 201 ವಿದ್ಯಾರ್ಥಿಗಳಿಗೆ ಎಜುಕೇಷನ್ ಸ್ಕಾಲರ್ ಶಿಪ್ ನೀಡಿದ್ದರು. ಸಿ.ಜೆ.ರಾಯ್ 12 ರೋಲ್ಸ್ ರಾಯ್ಸ್ ಕಾರ್ ಗಳನ್ನು ಹೊಂದಿದ್ದಾರೆ. ಹತ್ತು ಕೋಟಿ ರೂಪಾಯಿ ಬೆಲೆಬಾಳುವ ಫ್ಯಾಂಟೋನ್-8 ಕಾರ್  ಅನ್ನು 10 ಕೋಟಿ ರೂಪಾಯಿ ನೀಡಿ ಖರೀದಿಸಿದ್ದರು. ಇಂಥ ಲಕ್ಷುರಿ, ಐಷಾರಾಮಿ ಜೀವನ ನಡೆಸುತ್ತಿದ್ದ ಉದ್ಯಮಿ ಸಿ.ಜೆ.ರಾಯ್ ಧೀಡೀರನೇ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಶಾಕಿಂಗ್.
ಬಿಗ್ ಬಾಸ್ ವಿನ್ನರ್ ಗಳಿಗೆ 50 ಲಕ್ಷ ರೂಪಾಯಿ ಹಣವನ್ನು ಸಿ.ಜೆ.ರಾಯ್ ಪ್ರಾಯೋಕತ್ವ ಮಾಡುತ್ತಿದ್ದರು. ಆದರೆ ಇಂದು ಆತ್ಮಹತ್ಯೆಗೆ ಶರಣಾಗಿ ಶಾಕ್ ನೀಡಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now