Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಲೂರು ಪುರಸಭೆ ಅಧ್ಯಕ್ಷರಾಗಿ ಅನಿತಾ ಹೆಸರು : ಚುನಾವಣಾಧಿಕಾರಿ ಕಾರು ಅಡ್ಡಗಟ್ಟಿದ ಕಾಂಗ್ರೆಸ್ಸಿಗರು..!

Facebook
Twitter
Telegram
WhatsApp

ಕೋಲಾರ : ಇಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕೋಲಾರದ ಮಾಲೂರಿನಲ್ಲಿ ಫಲಿತಾಂಶ ಹೊರ ಬಿದ್ದ ಮೆ ಹೈಡ್ರಾಮ ಶುರುವಾಗಿದೆ.

ಮಾಲೂರು ಪುರಸಭೆ ನೂತನ ಅಧ್ಯಕ್ಷ್ಯರಾಗಿ ಅನಿತಾ ಹೆಸರು ಘೋಷಣೆ ಮಾಡಲಾಗಿದೆ. ಚುನಾವಣಾ ಅಧಿಕಾರಿ ರಮೇಶ್ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಶಾಸಕ ನಂಜೇಗೌಡ ಪ್ರತಿಭಟನೆ ನಡೆಸಿದ್ದಾರೆ. ಹತ್ತಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ತಹಶಿಲ್ದಾರ್ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಮಾಲೂರು ಪುರಸಭೆ ಅಧ್ಯಕ್ಷ್ಯ ಚುನಾವಣೆ ಗೊಂದಲದ ವಿಚಾರವಾಗಿ ಈ ರೀತಿ ಘಟನೆ ನಡೆದಿದೆ. ಮಧ್ಯಾಹ್ನ ತಹಶಿಲ್ದಾರ್ ರಮೇಶ್ ಫಲಿತಾಂಶ ಘೋಷಿಸದೆ ತೆರಳಿದ್ದರು. ಬಳಿಕ ಅಧ್ಯಕ್ಷ್ಯ ಸ್ತಾನಕ್ಕೆ ಪೈಪೋಟಿ ಮಾಡಿದ್ದ ಬಿಜೆಪಿ ಸದಸ್ಯೆ ಅನಿತಾ ರನ್ನ ನೂತನ ಅಧ್ಯಕ್ಷ್ಯರಾಗಿ ಘೋಷಣೆ ಮಾಡಿದ್ದರು.

ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಸದಸ್ಯೆ ಅನಿತಾ 17 ಮತಗಳನ್ನ ಪಡೆದುಕೊಂಡಿದ್ದರು. ಕಾಂಗ್ರೆಸ್ ಸದಸ್ಯೆ ಭವ್ಯ 16 ಮತಗಳನ್ನ ಪಡೆದುಕೊಂಡಿದ್ದರು. ಮಧ್ಯಾಹ್ನ ಫಲಿತಾಂಶ ಘೋಷಿಸದೆ ಹೈಕೋರ್ಟ್ ಗಮನಕ್ಕೆ ತರುವುದಾಗಿ ಅಧಿಕಾರಿ ರಮೇಶ್ ಹೇಳಿದ್ದರು. ಬಿಜೆಪಿ ನಾಯಕರ ಒತ್ತಡಕ್ಕೆ ತಹಶಿಲ್ದಾರ್ ರಮೇಶ್ ಮಣಿದು ಫಲಿತಾಂಶ ಘೋಷಿಸಿರೊ ಆರೋಪ ಕೇಳಿ ಬಂದಿದೆ.

ಹೀಗಾಗಿ ಫಲಿತಾಂಶ ಹಿಂಪಡೆಯುವಂತೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದಾರೆ. ಹೈಕೋರ್ಟ್ ಆದೇಶದಂತೆ 4 ನಾಮನಿರ್ದೇಶಿತರ ಸದಸ್ಯರಿಗೆ ಮತದಾನದ ಹಕ್ಕು ಇದೆ. ಮತದಾನದ ಹಕ್ಕಿನ ವಿಚಾರಣೆ ಫೂರ್ಣಗೊಳ್ಳುವವರೆಗು ಫಲಿತಾಂಶ ಘೋಷಿಸದಂತೆ ಕಾಂಗ್ರೆಸ್ ಆಗ್ರಹ ಮಾಡಿದೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

error: Content is protected !!