Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರದೆ ಇದ್ದರೆ ಮಗಳನ್ನು ಮನೆಗೆ ಕಳುಹಿಸಲ್ಲ : ರಾಯಚೂರಿನಲ್ಲಿ ಅಳಿಯನಿಗೆ ಮಾವನ ಡಿಮ್ಯಾಂಡ್..!

Facebook
Twitter
Telegram
WhatsApp

ರಾಯಚೂರು: ಈ ಸಾಲನ್ನು ನೋಡೊದ್ರೆ ರಾಜಕೀಯ ಅನ್ನೋದು ಎಲ್ಲಿಗೆ ಬಂದು ನಿಂತಿದೆ ಎಂಬುದು ತಿಳಿಯಲಿದೆ. ಸದ್ಯ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮೂರು ಪಕ್ಷಗಳು ಹಪಹಪಿಸುತ್ತಿವೆ. ಅದರ ಜೊತೆಗೆ ಜನ ಕೂಡ ತಮಗಿಷ್ಟವಾದ ಪಕ್ಷಕ್ಕೆ ಪ್ರಚಾರ ಮಾಡುವಲ್ಲಿ ಜನ ಕೂಡ ನಿರತರಾಗಿದ್ದಾರೆ. ಈ ಪ್ರಚಾರದ ಅಬ್ಬರದಲ್ಲಿ ವಿಚಿತ್ರ ಘಟನೆ ಒಂದು ನಡೆದಿದೆ.

ರಾಯಚೂರಿನಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿದೆ. ರಾಜಕೀಯ ಈಗ ವೈಯಕ್ತಿಕ ಆಗಿರುವ ಸಂಗತಿ ಜಿಲ್ಲೆಯ ಹುಣಸಗಿ ತಾಲೂಕಿನ ಸೊನ್ನಾಪುರ ತಾಂಡಾದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಪರಶುರಾಮ್ ಚೌಹ್ಹಾಣ್ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಆದರೆ ಮಾವ ಚಂದ್ರು ಬಿಜೆಪಿಯಲ್ಲಿದ್ದಾರೆ. ಪರಶುರಾಮ್ ಪತ್ನಿ ಹೆರಿಗೆಗೆ ಎಂದು ತವರಿಗೆ ಹೋಗಿದ್ದರು. ಈಗ ಮಾವ ಅದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ.

ಮಗಳನ್ನು ಮನೆಗೆ ಕಳುಹಿಸುವಂತೆ ಅಳಿಯ, ಮಾವನಿಗೆ ಕೇಳಿದ್ದಾರೆ. ಆದರೆ ಈ ವೇಳೆ ಮಾವ ಸ್ಪೆಷಲ್ ಡಿಮ್ಯಾಂಡ್ ಇಟ್ಟಿದ್ದಾರೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದರೆ ಮಾತ್ರ ಮಗಳನ್ನು ಕಳುಹಿಸುವುದು ಎಂದು ಹೇಳಿದ್ದಾರೆ. ಆದರೆ ಅಳಿಯ ಮಾವನ ಡಿಮ್ಯಾಂಡ್ ಗೆ ಕ್ಯಾರೆ ಎಂದಿಲ್ಲ. ಈಗ ಮಾವ, ತನ್ನ ಮಗಳು, ಮಗುವನ್ನು ಕಳುಹಿಸುತ್ತಾರಾ ಇಲ್ಲವಾ ಎಂಬುದನ್ನು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!