Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್.. ಬಿಜೆಪಿ ಪಕ್ಷದಿಂದ ಜಾತ್ರೆ, ಯಾತ್ರೆ : ಕಡೆಗೆ ಬೀದಿಗೆ ಬೀಳೋದು ಮಾತ್ರ ಸಾಮಾನ್ಯ‌ ಬದುಕು..!

Facebook
Twitter
Telegram
WhatsApp

ಬೆಂಗಳೂರು: ಒಂದು ಕಡೆ ಕೊರೊನಾ ಕೇಸ್ ಯರ್ರಾಬಿರ್ರಿ ಏರಿಕೆಯಾಗ್ತಾ ಇದೆ. ನಿನ್ನೆ ಒಂದೇ ದಿನ 12 ಸಾವಿರ ಕೇಸ್ ದಾಖಲಾಗಿದೆ. ಕೊರೊನಾ ಕಂಟ್ರೋಲ್ ಗೆ ಅಂತಾನೆ ಬಿಜೆಪಿ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದೆ. ಆ ಟಫ್ ರೂಲ್ಸ್ ನಲ್ಲಿ ಪ್ರತಿಭಟನೆ, ಜಾತ್ರೆ, ರ್ಯಾಲಿ ಇತ್ಯಾದಿ ಇತ್ಯಾದಿ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಸದ್ಯ ಜಾರಿಯಾಗಿರುವ ಟಫ್ ರೂಲ್ಸ್ ನಿಂದಲೇ ಜನ ಕಂಗಲಾಗಿದ್ದಾರೆ. ಬದುಕು ಈಗ್ಲೆ ಮೂರಾಬಟ್ಟೆಯಾಗಿದೆ. ಇನ್ನು ಹೀಗೆ ಆದ್ರೆ ಮತ್ತೆಲ್ಲಿಗೆ ಹೋಗಿ ನಿಲ್ಲುತ್ತೋ ಎಂಬ ಭಯ ಜನರದ್ದು.

ಹೀಗಿರುವಾಗ ಕೋವಿಡ್ ಹೆಚ್ಚಳ ಆಗೋದಕ್ಕೆ ಕಾರಣ ಆಗ್ತಾ ಇರೋದು ಸಾಮಾನ್ಯ ಜನರಲ್ಲ ಇದೇ ರಾಜಕಾರಣಿಗಳು. ಇವರು ಮಾಡುವ ರೂಲ್ಸ್ ಬ್ರೇಕ್ ಗಳಿಂದ ಕೊರೊನಾ ಹೆಚ್ಚಾದ್ರೆ ನಮ್ಮ ಬದುಕು ಮತ್ತೆ ಬೀದಿಗೆ ಬೀಳುತ್ತೆ ಅಂತ ಸಾಮಾನ್ಯ ಜನ ಹಿಡಿ ಶಾಪ ಹಾಕುತ್ತಿದ್ದಾರೆ.

ಎರಡು ಪಕ್ಷಗಳು ಸಹ ಕೊರೊನಾ ರೂಲ್ಸ್ ಕಡೆ ಗಮನವನ್ನೆ ಕೊಡದೆ ತಮ್ಮ ಕೆಲಸಗಳನ್ನಷ್ಟೇ ಮಾಡುತ್ತಿದೆ. ಇತ್ತ ನಿನ್ನೆಯಲ್ಲ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದಾರೆ. ಸಾಕಷ್ಟು ಜ‌ನ ಸೇರಿದ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲ, ಸೋಷಿಯಲ್ ಡಿಸ್ಟೆನ್ಸ್ ಮೊದಲೇ ಇಲ್ಲ.

ಇವತ್ತು ಬಿಜೆಪಿ ನಾಯಕರಿಂದಲೂ ಕೊರೊನಾ ರೂಲ್ಸ್ ಬ್ರೇಕ್ ಆಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಕೊರೊನಾ ನಿಯಮಗಳನ್ನ ಗಾಳಿಗೆ ತೂರಿ ಸಾವಿರಾರು ಜನ ಸೇರಿರುವ ಹೋರಿ ಬೆದರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಇದು ಸಾಮಾನ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಟಫ್ ರೂಲ್ಸ್ ಮತ್ತೊಂದು. ಯಾವುದೆ ನಿಯಮಗಳನ್ನ ಹಾಕಿದ್ರು ನಾವುಗಳು ಚಾಚು ತಪ್ಪದೆ ಪಾಲನೆ ಮಾಡುತ್ತಿದ್ದೇವೆ. ದುಡಿಮೆ ಇಲ್ಲದಿದ್ದರು ಕೊರೊನಾ ಕಂಟ್ರೋಲ್ ಗೆ ಮಾಡಿರುವ ರೂಲ್ಸ್ ಬ್ರೇಕ್ ಮಾಡ್ತಿಲ್ಲ. ಆದ್ರೆ ರಾಜಕಾರಣಿಗಳೇ ಕೊರಿನಾ ಹಬ್ಬಿಸಿ, ಮತ್ತೆ ನಮ್ಮ ಬದುಕನ್ನೇ ಬದಿಗೆ ತಂದ್ರೆ ಹೊಣೆ ಯಾರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ

ಚಿತ್ರದುರ್ಗ | ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ ಆಚರಣೆ : ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಹಿಂದಿನಿಂದಲೂ ಈಡಿಗರ ಸಮುದಾಯದ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯವಿಟ್ಟುಕೊಂಡಿದೆ. ನನ್ನ

ಚಿತ್ರದುರ್ಗ | ಒನಕೆ ಓಬವ್ವ ಜಯಂತಿ ಅದ್ದೂರಿ ಆಚರಣೆಗೆ ಸಿದ್ದತೆ : ಪೂರ್ವಭಾವಿ ಸಭೆಯಲ್ಲಿ ಮುಖಂಡರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಮುಂದಿನ ತಿಂಗಳು ನಡೆಯುವ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ

error: Content is protected !!