Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್.. ಬಿಜೆಪಿ ಪಕ್ಷದಿಂದ ಜಾತ್ರೆ, ಯಾತ್ರೆ : ಕಡೆಗೆ ಬೀದಿಗೆ ಬೀಳೋದು ಮಾತ್ರ ಸಾಮಾನ್ಯ‌ ಬದುಕು..!

Facebook
Twitter
Telegram
WhatsApp

ಬೆಂಗಳೂರು: ಒಂದು ಕಡೆ ಕೊರೊನಾ ಕೇಸ್ ಯರ್ರಾಬಿರ್ರಿ ಏರಿಕೆಯಾಗ್ತಾ ಇದೆ. ನಿನ್ನೆ ಒಂದೇ ದಿನ 12 ಸಾವಿರ ಕೇಸ್ ದಾಖಲಾಗಿದೆ. ಕೊರೊನಾ ಕಂಟ್ರೋಲ್ ಗೆ ಅಂತಾನೆ ಬಿಜೆಪಿ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದೆ. ಆ ಟಫ್ ರೂಲ್ಸ್ ನಲ್ಲಿ ಪ್ರತಿಭಟನೆ, ಜಾತ್ರೆ, ರ್ಯಾಲಿ ಇತ್ಯಾದಿ ಇತ್ಯಾದಿ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಸದ್ಯ ಜಾರಿಯಾಗಿರುವ ಟಫ್ ರೂಲ್ಸ್ ನಿಂದಲೇ ಜನ ಕಂಗಲಾಗಿದ್ದಾರೆ. ಬದುಕು ಈಗ್ಲೆ ಮೂರಾಬಟ್ಟೆಯಾಗಿದೆ. ಇನ್ನು ಹೀಗೆ ಆದ್ರೆ ಮತ್ತೆಲ್ಲಿಗೆ ಹೋಗಿ ನಿಲ್ಲುತ್ತೋ ಎಂಬ ಭಯ ಜನರದ್ದು.

ಹೀಗಿರುವಾಗ ಕೋವಿಡ್ ಹೆಚ್ಚಳ ಆಗೋದಕ್ಕೆ ಕಾರಣ ಆಗ್ತಾ ಇರೋದು ಸಾಮಾನ್ಯ ಜನರಲ್ಲ ಇದೇ ರಾಜಕಾರಣಿಗಳು. ಇವರು ಮಾಡುವ ರೂಲ್ಸ್ ಬ್ರೇಕ್ ಗಳಿಂದ ಕೊರೊನಾ ಹೆಚ್ಚಾದ್ರೆ ನಮ್ಮ ಬದುಕು ಮತ್ತೆ ಬೀದಿಗೆ ಬೀಳುತ್ತೆ ಅಂತ ಸಾಮಾನ್ಯ ಜನ ಹಿಡಿ ಶಾಪ ಹಾಕುತ್ತಿದ್ದಾರೆ.

ಎರಡು ಪಕ್ಷಗಳು ಸಹ ಕೊರೊನಾ ರೂಲ್ಸ್ ಕಡೆ ಗಮನವನ್ನೆ ಕೊಡದೆ ತಮ್ಮ ಕೆಲಸಗಳನ್ನಷ್ಟೇ ಮಾಡುತ್ತಿದೆ. ಇತ್ತ ನಿನ್ನೆಯಲ್ಲ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದಾರೆ. ಸಾಕಷ್ಟು ಜ‌ನ ಸೇರಿದ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲ, ಸೋಷಿಯಲ್ ಡಿಸ್ಟೆನ್ಸ್ ಮೊದಲೇ ಇಲ್ಲ.

ಇವತ್ತು ಬಿಜೆಪಿ ನಾಯಕರಿಂದಲೂ ಕೊರೊನಾ ರೂಲ್ಸ್ ಬ್ರೇಕ್ ಆಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಕೊರೊನಾ ನಿಯಮಗಳನ್ನ ಗಾಳಿಗೆ ತೂರಿ ಸಾವಿರಾರು ಜನ ಸೇರಿರುವ ಹೋರಿ ಬೆದರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಇದು ಸಾಮಾನ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಟಫ್ ರೂಲ್ಸ್ ಮತ್ತೊಂದು. ಯಾವುದೆ ನಿಯಮಗಳನ್ನ ಹಾಕಿದ್ರು ನಾವುಗಳು ಚಾಚು ತಪ್ಪದೆ ಪಾಲನೆ ಮಾಡುತ್ತಿದ್ದೇವೆ. ದುಡಿಮೆ ಇಲ್ಲದಿದ್ದರು ಕೊರೊನಾ ಕಂಟ್ರೋಲ್ ಗೆ ಮಾಡಿರುವ ರೂಲ್ಸ್ ಬ್ರೇಕ್ ಮಾಡ್ತಿಲ್ಲ. ಆದ್ರೆ ರಾಜಕಾರಣಿಗಳೇ ಕೊರಿನಾ ಹಬ್ಬಿಸಿ, ಮತ್ತೆ ನಮ್ಮ ಬದುಕನ್ನೇ ಬದಿಗೆ ತಂದ್ರೆ ಹೊಣೆ ಯಾರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!