Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ತಾರತಮ್ಯ ವಿರೋಧಿಸಿ ಫೆ.6ರಂದು ದೆಹಲಿ ಚಲೋಗೆ ಕರೆಕೊಟ್ಟ ಕಾಂಗ್ರೆಸ್..!

---Advertisement---

 

 

ಬೆಂಗಳೂರು: ನಿನ್ನೆಯಷ್ಟೇ ಕೇಂದ್ರ ಸರ್ಕಾರದಿಂದ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ಈ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ. ಇದೀಗ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ನವರು ದೆಹಲಿ ಚಲೋ ಹಮ್ಮಿಕೊಂಡಿದ್ದಾರೆ. ಫೆಬ್ರವರಿ 6ರಂದು ದೆಹಲಿ ಚಲೋ ನಡೆಸಲಿದ್ದು, ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

 

ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ಎಲ್ಲಾ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ. ಅವರು ಎಲ್ಲಿ ಜಾಗ ಕೇಳುತ್ತಾರೆ ನೋಡುತ್ತೇವೆ. ನಮ್ಮ ಹಕ್ಕನ್ನು ಕೇಳಲು ಹೋರಾಟ ಮಾಡುತ್ತೇವೆ. ತೆರಿಗೆ ತಾರತಮ್ಯ ಖಂಡಿಸಿ, ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಚಲೋ ನಡೆಸುತ್ತೇವೆ‌‌. ಕರ್ನಾಟಕ ರಾಜ್ಯ ದೇಶದಲ್ಲೆ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಅತೀ ಹೆಚ್ಚು ತೆರಿಗೆ ಕಟ್ಟುತ್ತೇವೆ. ನಿನ್ನೆಯ ಬಜೆಟ್ ಮಾತ್ರ ಐದು ವರ್ಷದ ಬಜೆಟ್ ಗಮನಿಸಬೇಕು. ನಮಗೆ ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಕ್ಕಿಲ್ಲ. 2018-19 ರಲ್ಲಿ ಅನುದಾನಕ್ಕಿಂತ 40% ರಿಂದ 45% ಕಡಿಮೆ ಆಗಿದೆ. ಪ್ರತಿ ವರ್ಷ 7ಸಾವಿರ, ಎಂಟು ಸಾವಿರ ರೂ. ಕಡಿಮೆ ಆಗುತ್ತಿದೆ. ಬಜೆಟ್ ಡಬಲ್ ಆದರೂ ತೆರಿಗೆ ಪಾಲು ಹೆಚ್ಚು ಬಂದಿಲ್ಲ.

 

ನಾನು ಕೇಂದ್ರದ ಸಚಿವರಿಗೆ ಪತ್ರ ಬರೆದಿದ್ದೇವೆ. ನಮಗೆ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ತಿಳಿಸಿದ್ದೇವೆ. ಆದರೆ ಯಾವುದೇ ಉತ್ತರ ಕೇಂದ್ರದಿಂದ ಬಂದಿಲ್ಲ. ನಿನೆ ಬಜೆಟ್​ನಲ್ಲಿ ಏನಾದರೂ ಸಿಗಬಹುದು ಅನ್ನುವ ನಿರೀಕ್ಷೆ ಇತ್ತು ಅದೂ‌ ಆಗಿಲ್ಲ. ನಾನು ದೆಹಲಿ, ಮುಂಬೈ ನಗರಗಳನ್ನು ಗಮನಿಸಿದ್ದೇನೆ. ನಮ್ಮ ನಗರ ಸಹ ಹೆಲ್ತ್ ಟೂರಿಸಂ ಆಗುತ್ತಿದೆ. ನಾನು ಒಂದಷ್ಟು ದಿನ ವೈದ್ಯಕೀಯ ಶಿಕ್ಷಣ ಸಚಿವ ಆಗಿದ್ದೆ. ಗ್ರಾಮೀಣ ಪ್ರದೇಶದ ಜನರನ್ನು ಬೆಂಗಳೂರಿಗೆ ತರುವುದಕ್ಕೆ ತುಂಬಾ ತೊಂದರೆ ಆಗುತ್ತಿದೆ. ಐಸಿಯು ಹಾಗೂ 108 ಏನಿದೆ ಅಲ್ಲಿ, ಸಿಬ್ಬಂದಿ ಕಾಳಜಿ ಮಾಡಬೇಕು ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment