Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜಯಪುರ ಹೆಸರು ಬದಲಾಯಿಸಲು ಕಾಂಗ್ರೆಸ್ ತೀರ್ಮಾನ : ಬಸವಣ್ಣನವರ ಹೆಸರಿಡಲು ಚಿಂತನೆ..!

Facebook
Twitter
Telegram
WhatsApp

 

 

 

ವಿಜಯಪುರ: ಈ ಮೊದಲೇ ಒಮ್ಮೆ ಹೆಸರು ಬದಲಾಯಿಸಲಾಗಿದ್ದ ವಿಜಯಪುರ ಜಿಲ್ಲೆಯ ಹೆಸರನ್ನು ಮತ್ತೊಮ್ಮೆ ಬದಲಾಯಿಸುವುದಕ್ಕೆ ಪ್ಲ್ಯಾನ್ ಮಾಡಿದ್ದಾರೆ. ಬಿಜಾಪುರವನ್ನು ಕಾಂಗ್ರೆಸ್ ಸರ್ಕಾರವೇ ಈ ಹಿಂದೆ ವಿಜಯಪುರ ಎಂದು ಬದಲಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವಿಜಯಪುರ ಹೆಸರನ್ನು ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ.

 

ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಬಸವಣ್ಣನವರ ಹೆಸರನ್ನು, ವಿಜಯಪುರಕ್ಕೆ ಇಡಲು ನಿರ್ಧಾರ ಮಾಡಲಾಗಿದೆ. ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಬಗ್ಗೆ ಜಿಲ್ಲಾಧಿಕಾರಿ ಟಿ ಭೂಬ್ಲನ್ ತಿಳಿಸಿದ್ದಾರೆ. ಜಿಲ್ಲೆಗೆ ಬಸವೇಶ್ವರ ಜಿಲ್ಲೆ ಎಂದು ಮರುನಾಮಕರಣ ಮಾಡಲು ನಿರ್ಧಾರ ಮಾಡಿದ್ದು, ಅಧಿಸೂಚನೆಯಲ್ಲಿ ಅದನ್ನೇ ಹೊರಡಿಸಿದೆ.

ಬಸವೇಶ್ವರ ಜಿಲ್ಲೆ ಎಂದು ಹೆಸರಿಡಲು ಜನಪ್ರತಿನಿಧಿಗಳು, ಗಣ್ಯರು, ಎನ್ ಜಿ ಒ ಗಳು, ಸಾರ್ವಜನಿಕರಿಗೂ ಅಭಿಪ್ರಾಯ ತಿಳಿಸುವಂತೆ ಕೇಳಿದೆ. ಹದಿನೈದು ದಿನದ ಒಳಗೆ ತಮ್ಮ ಅಭಿಪ್ರಾಯ ತಿಳಿಸಲು ಸೂಚನೆ ನೀಡಲಾಗಿದೆ. ಆದರೆ ಇದರ ನಡುವೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೆಸರನ್ನು ಮತ್ತೆ ಮತ್ತೆ ಬದಲಾಯಿಸುವ ಅವಶ್ಯಕತೆ ಇಲ್ಲ. ಮೊದಲು ಅಭಿವೃದ್ಧಿಯ ಕಡೆಗೆ ಗಮನ ಹರಿಸಿ ಎಂದು ಹಲವರು ಸಲಹೆಯನ್ನು ನೀಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!