Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜಯಪುರ ಹೆಸರು ಬದಲಾಯಿಸಲು ಕಾಂಗ್ರೆಸ್ ತೀರ್ಮಾನ : ಬಸವಣ್ಣನವರ ಹೆಸರಿಡಲು ಚಿಂತನೆ..!

---Advertisement---

 

 

 

ವಿಜಯಪುರ: ಈ ಮೊದಲೇ ಒಮ್ಮೆ ಹೆಸರು ಬದಲಾಯಿಸಲಾಗಿದ್ದ ವಿಜಯಪುರ ಜಿಲ್ಲೆಯ ಹೆಸರನ್ನು ಮತ್ತೊಮ್ಮೆ ಬದಲಾಯಿಸುವುದಕ್ಕೆ ಪ್ಲ್ಯಾನ್ ಮಾಡಿದ್ದಾರೆ. ಬಿಜಾಪುರವನ್ನು ಕಾಂಗ್ರೆಸ್ ಸರ್ಕಾರವೇ ಈ ಹಿಂದೆ ವಿಜಯಪುರ ಎಂದು ಬದಲಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವಿಜಯಪುರ ಹೆಸರನ್ನು ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ.

 

ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಬಸವಣ್ಣನವರ ಹೆಸರನ್ನು, ವಿಜಯಪುರಕ್ಕೆ ಇಡಲು ನಿರ್ಧಾರ ಮಾಡಲಾಗಿದೆ. ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಬಗ್ಗೆ ಜಿಲ್ಲಾಧಿಕಾರಿ ಟಿ ಭೂಬ್ಲನ್ ತಿಳಿಸಿದ್ದಾರೆ. ಜಿಲ್ಲೆಗೆ ಬಸವೇಶ್ವರ ಜಿಲ್ಲೆ ಎಂದು ಮರುನಾಮಕರಣ ಮಾಡಲು ನಿರ್ಧಾರ ಮಾಡಿದ್ದು, ಅಧಿಸೂಚನೆಯಲ್ಲಿ ಅದನ್ನೇ ಹೊರಡಿಸಿದೆ.

ಬಸವೇಶ್ವರ ಜಿಲ್ಲೆ ಎಂದು ಹೆಸರಿಡಲು ಜನಪ್ರತಿನಿಧಿಗಳು, ಗಣ್ಯರು, ಎನ್ ಜಿ ಒ ಗಳು, ಸಾರ್ವಜನಿಕರಿಗೂ ಅಭಿಪ್ರಾಯ ತಿಳಿಸುವಂತೆ ಕೇಳಿದೆ. ಹದಿನೈದು ದಿನದ ಒಳಗೆ ತಮ್ಮ ಅಭಿಪ್ರಾಯ ತಿಳಿಸಲು ಸೂಚನೆ ನೀಡಲಾಗಿದೆ. ಆದರೆ ಇದರ ನಡುವೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೆಸರನ್ನು ಮತ್ತೆ ಮತ್ತೆ ಬದಲಾಯಿಸುವ ಅವಶ್ಯಕತೆ ಇಲ್ಲ. ಮೊದಲು ಅಭಿವೃದ್ಧಿಯ ಕಡೆಗೆ ಗಮನ ಹರಿಸಿ ಎಂದು ಹಲವರು ಸಲಹೆಯನ್ನು ನೀಡುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment