ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಈಗ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಇತ್ತೀಚೆಗಷ್ಟೇ ಪ್ರಿಯಾಂಕ್ ಖರ್ಗೆ ಅವರು ದೆಹಲಿಗೆ ಹೋಗಿದ್ದರು. ಅಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಬಂದಿದ್ದಾರೆ. ರಾಜ್ಯ ರಾಜಕೀಯದ ಬೆಳವಣಿಗೆಯ ಬಗ್ಗೆ ಸಹಜವಾಗಿಯೇ ತಿಳಿಸಿದ್ದಾರೆ. ಹೀಗಾಗಿ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳು ರಾಜ್ಯದಲ್ಲೂ ಬಹಳ ಮುಖ್ಯವಾಗುತ್ತವೆ. ಇದೀಗ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅವರು ನೀಡಿರುವ ಹೇಳಿಕೆ ಶಾಕಿಂಗ್ ಆಗಿದೆ.
ಯಾರೋ ಒಬ್ಬರಿಂದ ಪಾರ್ಟಿ ಇಲ್ಲ. ಸಿದ್ದರಾಮಯ್ಯ ಎರಡಯ ದಶಕದಿಂದ ಕಾಂಗ್ರೆಸ್ ನಲ್ಲಿ ಇದ್ದಾರೆ. ಅದಕ್ಕಿಂತ ಮೊದಲು ಕಾಂಗ್ರೆಸ್ ಪಕ್ಷ ಇತ್ತು ಅಲ್ವಾ..? ಅವರನ್ನು ಸಿಎಂ ಮಾಡಿದ್ದು, ಕಾಂಗ್ರೆಸ್ ಅಲ್ಲವೇ..? ಸಿದ್ದರಾಮಯ್ಯ ಅವರು ಪ್ರಬಲ ನಾಯಕರು. ಸಾಕಷ್ಟು ಪ್ರಬಲ ನಾಯಕರು ಪಕ್ಷದಲ್ಲಿ ಇದ್ದಾರೆ. ಎಲ್ಲರೂ ಸೇರಿದರೆ ಪಾರ್ಟಿ ಆಗುತ್ತೆ.
ಪಾರ್ಟಿ ಕಾರ್ಯಕರ್ತರನ್ನ ಬೆಳೆಸುತ್ತೆ, ಕಾರ್ಯಕರ್ತರು ನಾಯಕರನ್ನ ಬೆಳೆಸುತ್ತಾರೆ. ಹೀಗೆ ಸಿದ್ದರಾಮಯ್ಯ, ಡಿಕೆಶಿ, ಜಾರಕಿಹೊಳಿ ಎಲ್ಲರೂ ಕಾರ್ಯಕರ್ತರು ಬೆಳೆಸಿದ ನಾಯಕರು. ಇಲ್ಲಿ ಏನೇ ಇದ್ದರು ವರಿಷ್ಠರು ತೀರ್ಮಾನ ಮಾಡ್ತಾರೆ. ಶಾಸಕರು ಕೂಡ ಅವರ ಅಭಿಪ್ರಾಯ ತಿಳಿಸಬಹುದು. ಆದರೆ ಅಂತಿಮವಾಗಿ ಹೈಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಹಾಗೂ ಡಿಸಿಎಂಗೆ ನಾನು ಯಾಕೆ ಹೋಗಿದ್ದೆ ಎಂಬ ವಿಚಾರವನ್ನ ತಿಳಿಸಿದ್ದೇನೆ. ವೋಟ್ ಚೋರಿ, ಚಿಲುಮೆ ವಿಚಾರ ಸೇರಿ ಚರ್ಚೆ ಮಾಡಿ ಬಂದಿದ್ದೇನೆ. ಈ ಎಲ್ಲಾ ಬೆಳವಣಿಗೆಯ ವಿಚಾರವನ್ನು ಸಿಎಂ ಮತ್ತು ಡಿಸಿಎಂ ಕೂಡ ಹೈಕಮಾಂಡ್ ಗೆ ಬಿಟ್ಟಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
