ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: “ಯತ್ನಾಳ್ ಹೇಳಿದ್ದಕ್ಕೆ ಸಭಾತ್ಯಾಗ ಮಾಡಿದೆವು” ಎನ್ನುವ ಮೂಲಕ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಎಂದು ಆರ್ ಅಶೋಕ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ!
ಬಿಜೆಪಿಯಲ್ಲಿ ಕೆಂಡದಂತಹ ಕಚ್ಚಾಟವಿದೆ ಎಂಬುದನ್ನೂ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಪಕ್ಷದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಮಾತಿಗೆ ಮೂರು ಪೈಸೆ ಕಿಮ್ಮತ್ತಿಲ್ಲ ಎನ್ನುವುದು ಕೂಡ ಬಿಜೆಪಿಯ “ಸದನ ಕದನ”ದಿಂದ ಬಯಲಾಗಿದೆ. Dear @BJP4Karnataka, ನಿಮ್ಮದು “ಮನೆಯೊಂದು ಮೂರು ಬಾಗಿಲಲ್ಲ, ಮುನ್ನೂರು ಬಾಗಿಲು” ಅಲ್ಲವೇ!
ರಾಜಕೀಯ ಪಕ್ಷ ಬದಲಾದಂತೆ “ಹಿಂದೂ ಉಲಿ”ಯ ವೇಷವೂ ಬದಲಾಗುತ್ತದೆ! ಮುಸ್ಲಿಮರೊಂದಿಗೆ ವ್ಯಾಪಾರ, ವ್ಯವಹಾರ.
ಮುಸ್ಲಿಮರೊಂದಿಗೆ ಬದುಕು. ಹೊರಗೆ ಮಾತ್ರ ಮುಸ್ಲಿಮರ ಮೇಲೆ ದ್ವೇಷ ಭಾಷಣ. ಬಸನಗೌಡಪಾಟೀಲ್ ಯತ್ನಾಳ್ ಅವರೇ, ಮುಸ್ಲಿಂ ಟೋಪಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣ್ತಿದಿರಿ! ನೀವು ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಜನತೆಗೆ ದ್ವೇಷ ತುಂಬುವ ನಿಮ್ಮ ಬೂಟಾಟಿಕೆಯನ್ನು ಇನ್ನಾದರೂ ಬಿಡಿ.
ಬಿಜೆಪಿಯಲ್ಲಿನ ಕಚ್ಚಾಟದಿಂದಾಗಿ ಸಾಮ್ರಾಟರು “ಶೋಕ” ರಾಗ ಹಾಡುತ್ತಿದ್ದಾರೆ. ಅಶೋಕರಲ್ಲಿ ಆ ಕಳೆದು “ಶೋಕ” ಮಾತ್ರ ಉಳಿದುಕೊಂಡಿದೆ! ಸದನದಲ್ಲಿ ಏನು ಚರ್ಚಿಸಬೇಕು, ಏನು ಮಾಡಬೇಕು ಎನ್ನುವುದು ವಿರೋಧ ಪಕ್ಷದ ನಾಯಕನ ತೀರ್ಮಾನವೋ, ಶಾಸಕನೊಬ್ಬನ ತೀರ್ಮಾನವೋ? ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಅಶೋಕ್ ಅವರೊ, ಬಸನಗೌಡ ಪಾಟೀಲ್ ಯತ್ನಾಳ್ ಅವರೊ ಎಂಬ ಗೊಂದಲ ಸ್ವತಃ ಬಿಜೆಪಿಗರಿಗೆ ಇದ್ದಂತಿದೆ.
ಶಾಸಕಾಂಗ ಪಕ್ಷದ ನಾಯಕನ ನಿರ್ಧಾರಕ್ಕೆ ಅವರ ಶಾಸಕರೇ ಕಿಮ್ಮತ್ತು ಕೊಡದಿರುವುದು #BucketJanathaParty ಅನುಭವಿಸುತ್ತಿರುವ ದುರಂತ ಸ್ಥಿತಿ. ಬಕೆಟ್ ಹಿಡಿದು ವಿಪಕ್ಷ ನಾಯಕರಾಗಿದ್ದಕ್ಕೆ ನಿಮಗೆ ಈ ದುಃಸ್ಥಿತಿಯೇ ಅಶೋಕ್ ಅವರೇ. ಬಕೆಟ್ ಬಕೆಟ್ ಬಕೆಟ್….
“ಅಶೋಕ್ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವವರು”
– ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್!
– ಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು
B ಬಕೆಟ್ Jಜನತಾ Pಪಾರ್ಟಿ ಎಂದು ಟ್ವೀಟ್ ಮಾಡಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್