ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಪರೇಷನ್ ಹಸ್ತದ ಸದ್ದು ಒಂದು ಕಡೆ ಜೋರಾಗಿದೆ. ಸ್ಟ್ರಾಂಗ್ ಕ್ಯಾಂಡಿಡೇಟ್ ಗಳನ್ನೇ ಕಾಂಗ್ರೆಸ್ ಟಾರ್ಗೆಟ್ ಮಾಡಿದೆ. ಹೇಗಾದರೂ ಸರಿ ಈ ಬಾರಿ ರಾಜ್ಯದಲ್ಲೂ ಹೆಚ್ಚಿನ ಸೀಟುಗಳನ್ನು ಗೆಲ್ಲುವ ಹಠ ಕಾಂಗ್ರೆಸ್ ನವರದ್ದು. ಅದೆಂತೆ ಬಿಜೆಪಿ ಕೂಡ ಈ ಬಾರಿ ಗೆಲುವಿಗಾಗಿ ಹಂಬಲಿಸುತ್ತಿದೆ.
ಅದಕ್ಕಾಗಿಯೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ. ಮೈತ್ರಿ ಮೂಲಕ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕು ಎಂದುಕೊಂಡಿದೆ. ಬಿಜೆಪಿ ನಾಯಕರು ಆಗಾಗ ಹೇಳುತ್ತಾ ಇದ್ದಾರೆ. ನಮ್ಮ ಸಂಪರ್ಕದಲ್ಲೂ ಸಾಕಷ್ಟು ಶಾಸಕರಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ಅದು ಜಾಸ್ತಿ ಹೊತ್ತಿನ ಕೆಲಸವೇನು ಅಲ್ಲ ಎಂದೇ ಹೇಳಿದ್ದಾರೆ.

ಇದೀಗ ಇದೇ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಮಾತನಾಡಿದ್ದಾರೆ. ಶಾಕಿಂಗ್ ಎನಿಸುವಂತ ಹೇಳಿಕೆಯನ್ನೇ ನೀಡಿದ್ದಾರೆ. ಎಂಎಲ್ಸಿ ಬಿಕೆ ಹರಿಪ್ರಸಾದ್ ರನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಇದನ್ನೆಲ್ಲ ಗಮನಿಸಿದರೆ ಜನವರಿ ನಂತರ ಕಾಂಗ್ರೆಸ್ ಸರ್ಕಾರ ಪತನ ಖಚಿತ. ನಮ್ಮ ಸಂಪರ್ಕದಲ್ಲಿಯೂ 45 ಶಾಸಕರಿದ್ದಾರೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















