Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿ  ಗೃಹಲಕ್ಷ್ಮಿ ಯೋಜನೆ : ಚಳ್ಳಕೆರೆಯಲ್ಲಿ ಶಾಸಕ ಟಿ. ರಘುಮೂರ್ತಿ ಚಾಲನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಆ.30 : ನಗರದ  ಕಂಬಳಿ ಮಾರುಕಟ್ಟೆಯಲ್ಲಿ ಇಂದು ಶಾಸಕ ಟಿ ರಘುಮೂರ್ತಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಕಾಂಗ್ರೆಸ್ ಸರ್ಕಾರ ನೀಡಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತ ಬಂದಿದೆ. ಬಡವರ ಪರ ಕಾಂಗ್ರೆಸ್ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ರಘುಮೂರ್ತಿ ತಿಳಿಸಿದರು.

ನಂತರ ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಹರಿಪ್ರಸಾದ್, ಮಾತನಾಡಿ ತಾಲೂಕಿನಲ್ಲಿ ಒಟ್ಟು 87 ಸಾವಿರ ಮಹಿಳಾ ಯಜಮಾನರಿದ್ದು ಇದರಲ್ಲಿ 77 ಸಾವಿರ ಜನ ಮಾತ್ರ ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿದ್ದಾರೆ ಇನ್ನುಳಿದ ಫಲಾನುಭವಿಗಳು ಮುಂದಿನ ತಿಂಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸಿಡಿಪಿ ಹರಿಪ್ರಸಾದ್ ತಿಳಿಸಿದರು.

ಅರ್ಜಿ ಹಾಕದವರು ಯಾವುದೇ ಆತಂಕ ಪಡಬೇಕಿಲ್ಲ. ಮುಂದಿನ ಬಾರಿ ಅರ್ಜಿ ಬಿಟ್ಟಾಗ ಅರ್ಜಿ ಸಲ್ಲಿಸಿದರೆ ಮುಂದಿನ ಕಂತಿನಲ್ಲಿ ಅವರಿಗೆ ಹಣ ದೊರೆಯುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ, ನಗರಸಭೆ ಸದಸ್ಯರಾದ ಜಯಲಕ್ಷ್ಮಿ , ಕೃಷ್ಣಮೂರ್ತಿ,  ಮಂಜುಳಾ, ಪ್ರಸನ್ನ,  ರಮೇಶ್ ಗೌಡ,  ಮತ್ತಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...