Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಗಳ ರಕ್ಷಣೆಗೆ ನಿಂತಿದೆ : ಪಿ. ರಾಜೀವ್

---Advertisement---

ಸುದ್ದಿಒನ್, ಚಿತ್ರದುರ್ಗ ಏ. 22 : ಸಿಎಂ ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಸರ್ಕಾರ ಒಂದು ಸಮಾಜದ ಒಲೈಕೆಗಾಗಿ ಹಿಂದೂ ವಿರೋಧಿಗಳ ರಕ್ಷಣೆಗೆ ನಿಂತಿದ್ದಾರೆ ಎಂದು  ಕುಡುಚಿ ಮಾಜಿ ಶಾಸಕರು ಹಾಗು ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಪಿ. ರಾಜೀವ್ ಆರೋಪಿಸಿದರು.

ಚಿತ್ರದುರ್ಗ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.  ನೇಹ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಎಂ ಹಾಗೂ ಗೃಹ ಸಚಿವರು ನಿಕೃಷ್ಟವಾದ ಹೇಳಿಕೆ ನೀಡುತ್ತಿದ್ದಾರೆ ಇದು ರಾಜ್ಯದ ದೌರ್ಭಾಗ್ಯ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಚೊಂಬು ಜಾಹೀರಾತು ನೀಡುತ್ತಿದ್ದಾರೆ ಎಂದರು.

 

ರೈತರ ,ದಲಿತರ ಹಾಲು ಉತ್ಪಾದಕರ  ಪ್ರೋತ್ಸಾಹ ಸೇರಿದಂತೆ ಅನೇಕ ಯೋಜನೆಗಳನ್ನು ಕತ್ತರಿಸಿ ಜಬರ ಕೈಗೆ ಚೊಂಬು ಕೊಟ್ಟಿದ್ದು, ಕಾಂಗ್ರೆಸ್ ಎಂದರು. ಬಂಜಾರ ಸಮಾಜವು ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ನಿಲ್ಲುತ್ತದೆ. ಸಚಿವ ಸಂಪುಟದಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಎಂದ ಅವರು ಲೋಕಸಭೆ ಚುನಾವಣೆಯಲ್ಲಿ ಒಂದು ಟಿಕೆಟ್ ನೀಡಿಲ್ಲ. ಬಂಜಾರ ಭೋವಿ, ಕೊರಚ ಕೊರಮ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಇದು ಜನರಿಗೆ ಅರ್ಥವಾಗಿದೆ. ಇದೆಲ್ಲ ಬೆಳವಣಿಗೆ ಗಮನಿಸಿದ್ದು, ಕರ್ನಾಟಕದಿಂದ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಬೇಕು ಎಂದು ತೀರ್ಮಾನಿಸಿದೆ. 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ರಾಜ್ಯವನ್ನು ಶಾಂತಿ ತೋಟವನ್ನಾಗಿ ಮಾಡಲು ಬಿಜೆಪಿ ಸಿದ್ದವಿದ್ದು, ಅದಕ್ಕೆ ಜನರು ಬೆಂಬಲಿ ಗೆಲ್ಲಿಸುತ್ತಾರೆ ಎಂದರು.

ಈ ಸಮಯದಲ್ಲಿ ಹಗರಿಭೋಮ್ಮೇನಹಳ್ಳಿ ಶಾಸಕ ರಾಜೇಶ್ ನೇಮಿಚಂದ್, ಮಾಯಕೊಂಡ ಮಾಜಿ ಶಾಸಕ ಬಸವರಾಜ ನಾಯ್ಕ್,  ಹೂವಿನಹಡಗಲಿ ಶಿರಹಟ್ಟಿ ಶಾಸಕ ಕೃಷ್ಣನಾಯ್ಕ, ಡಾ.ಚಿತ್ರಲಮಾಣಿ, ಶಂಕರ್ ನಾಯ್ಕ್, ಮೃತುಂಜಯ ಬಾದಾಮಿ, ಎಸ್.ಕೆ.ಬೊಳ್ಳುಳ್ಳಿ ಮಾಧ್ಯಮ ವಕ್ತಾರ ನಾಗರಾಜ್ ಬೇದ್ರೇ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...