Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸವದಿ ಕೇಳಿರುವ ಎರಡು ಕ್ಷೇತ್ರ ಬಿಟ್ಟುಕೊಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪುತ್ತಾ..?

---Advertisement---

ಬೆಂಗಳೂರು: ಬಿಜೆಪಿಯಲ್ಲಿ ಈಗ ಬಂಡಾಯದ ಬಿಸಿ ಜೋರಾಗಿದೆ. ಲಕ್ಷ್ಮಣ ಸವದಿಗೆ ಟಕೆಟ್ ಮಿಸ್ಸಾದ ಬೆನ್ನಲ್ಲೇ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಕ್ಯಾಚ್ ಹಾಕಿಕೊಂಡಿದೆ. ಪಕ್ಷ ಯಾವುದಾದರೇನು ಟಿಕೆಟ್ ಮುಖ್ಯ, ಅಧಿಕಾರ ಮುಖ್ಯ ಎನ್ನುವಾಗ ಸವದಿ ಅವರು ಕೂಡ ಬಹಳ ಬೇಗನೇ ಬಂದು ಕಾಂಗ್ರೆಸ್ ನಲ್ಲಿ ಮೀಟಿಂಗ್ ಮಾಡಿದ್ದಾರೆ. ಕಾಂಗ್ರೆಸ್ ಸೇರ್ಪಡೆಗೆ ಡಿಮ್ಯಾಂಡ್ ಕೂಡ ಇಟ್ಟಿದ್ದಾರೆ.

ಈ ಬಾರಿ ಮಗನನ್ನು ಚುನಾವಣಾ ಅಖಾಡಕ್ಕೆ ಇಳಿಸುವ ಪ್ಲ್ಹಾನ್ ಮಾಡಿದ್ದರು ಸವದಿ. ಆದರೆ ಬಿಜೆಪಿ ನಾಯಕರು ಮಗನಿಗೆ ಇರಲಿ ತಂದೆಗೂ ಟಿಕೆಟ್ ಘೋಷಣೆ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ನಲ್ಲಿ ಮಗ ಮತ್ತು ತನಗೆ ಟಿಕೆಟ್ ಕೇಳಿದ್ದಾರೆ.

ಇಂದು ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಭೆ ನಡೆದಿದೆ. ಈ ವೇಳೆ ಲಕ್ಷ್ಮಣ ಸವದಿ ಅವರು, ಕಾಗವಾಡ ಹಾಗೂ ಅಥಣಿ ಎರಡು ಕ್ಷೇತ್ರದ ಟಿಕೆಟ್ ನಮಗೆ ಕೊಡಿ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನನ್ನದು. ಎರಡು ಕ್ಷೇತ್ರದಲ್ಲಿ ಯಾರು ಎಲ್ಲಿ ನಿಲ್ಲಬೇಕು ಎಂಬುದನ್ನು ತೀರ್ಮಾನಿಸಿ ಹೇಳುತ್ತೇವೆ. ಹೈಕಮಾಂಡ್ ಗೆ ಇದನ್ನು ಮನವರಿಗೆ ಮಾಡಿ ಎಂದಿದ್ದಾರೆ.

ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್ ನಾಯಕರು, ಸಾಧ್ಯವಾದಷ್ಟು ಇಬ್ಬರಿಗೂ ಟಿಕೆಟ್ ನೀಡುವ ಪ್ರಯತ್ನ ಮಾಡುತ್ತೇವೆ. ಹೈಕಮಾಂಡ್ ಬಳಿ ನಿಮ್ಮ ಡಿಮ್ಯಾಂಡ್ ಇಡಲಿದ್ದೇವೆ. ಒಂದು ವೇಳೆ ಒಂದೇ ಟಿಕೆಟ್ ನೀಡಿದರೆ ಅಥಣಿಯಲ್ಲಿ ನೀವೂ ಸ್ಪರ್ಧಿಸಿ, ಕಾಗವಾಡಕ್ಕೆ ಬೆಂಬಲ ನೀಡಿ ಎಂದಿದ್ದಾರೆ. ಈ ಷರತ್ತಿಗೆ ಸವದಿ ಕೂಡ ಒಪ್ಪಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...