Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸವದಿ ಕೇಳಿರುವ ಎರಡು ಕ್ಷೇತ್ರ ಬಿಟ್ಟುಕೊಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪುತ್ತಾ..?

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿಯಲ್ಲಿ ಈಗ ಬಂಡಾಯದ ಬಿಸಿ ಜೋರಾಗಿದೆ. ಲಕ್ಷ್ಮಣ ಸವದಿಗೆ ಟಕೆಟ್ ಮಿಸ್ಸಾದ ಬೆನ್ನಲ್ಲೇ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಕ್ಯಾಚ್ ಹಾಕಿಕೊಂಡಿದೆ. ಪಕ್ಷ ಯಾವುದಾದರೇನು ಟಿಕೆಟ್ ಮುಖ್ಯ, ಅಧಿಕಾರ ಮುಖ್ಯ ಎನ್ನುವಾಗ ಸವದಿ ಅವರು ಕೂಡ ಬಹಳ ಬೇಗನೇ ಬಂದು ಕಾಂಗ್ರೆಸ್ ನಲ್ಲಿ ಮೀಟಿಂಗ್ ಮಾಡಿದ್ದಾರೆ. ಕಾಂಗ್ರೆಸ್ ಸೇರ್ಪಡೆಗೆ ಡಿಮ್ಯಾಂಡ್ ಕೂಡ ಇಟ್ಟಿದ್ದಾರೆ.

ಈ ಬಾರಿ ಮಗನನ್ನು ಚುನಾವಣಾ ಅಖಾಡಕ್ಕೆ ಇಳಿಸುವ ಪ್ಲ್ಹಾನ್ ಮಾಡಿದ್ದರು ಸವದಿ. ಆದರೆ ಬಿಜೆಪಿ ನಾಯಕರು ಮಗನಿಗೆ ಇರಲಿ ತಂದೆಗೂ ಟಿಕೆಟ್ ಘೋಷಣೆ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ನಲ್ಲಿ ಮಗ ಮತ್ತು ತನಗೆ ಟಿಕೆಟ್ ಕೇಳಿದ್ದಾರೆ.

ಇಂದು ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಭೆ ನಡೆದಿದೆ. ಈ ವೇಳೆ ಲಕ್ಷ್ಮಣ ಸವದಿ ಅವರು, ಕಾಗವಾಡ ಹಾಗೂ ಅಥಣಿ ಎರಡು ಕ್ಷೇತ್ರದ ಟಿಕೆಟ್ ನಮಗೆ ಕೊಡಿ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನನ್ನದು. ಎರಡು ಕ್ಷೇತ್ರದಲ್ಲಿ ಯಾರು ಎಲ್ಲಿ ನಿಲ್ಲಬೇಕು ಎಂಬುದನ್ನು ತೀರ್ಮಾನಿಸಿ ಹೇಳುತ್ತೇವೆ. ಹೈಕಮಾಂಡ್ ಗೆ ಇದನ್ನು ಮನವರಿಗೆ ಮಾಡಿ ಎಂದಿದ್ದಾರೆ.

ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್ ನಾಯಕರು, ಸಾಧ್ಯವಾದಷ್ಟು ಇಬ್ಬರಿಗೂ ಟಿಕೆಟ್ ನೀಡುವ ಪ್ರಯತ್ನ ಮಾಡುತ್ತೇವೆ. ಹೈಕಮಾಂಡ್ ಬಳಿ ನಿಮ್ಮ ಡಿಮ್ಯಾಂಡ್ ಇಡಲಿದ್ದೇವೆ. ಒಂದು ವೇಳೆ ಒಂದೇ ಟಿಕೆಟ್ ನೀಡಿದರೆ ಅಥಣಿಯಲ್ಲಿ ನೀವೂ ಸ್ಪರ್ಧಿಸಿ, ಕಾಗವಾಡಕ್ಕೆ ಬೆಂಬಲ ನೀಡಿ ಎಂದಿದ್ದಾರೆ. ಈ ಷರತ್ತಿಗೆ ಸವದಿ ಕೂಡ ಒಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!