ಕಾಂಗ್ರೆಸ್ ನವರು ಜಾತಿಗೊಂದು ಡಿಸಿಎಂ ಗುಂಗಿನಲ್ಲಿದ್ದಾರೆ : ಕುಮಾರಸ್ವಾಮಿ ಕಿಡಿ

suddionenews
1 Min Read

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಡಿಸಿಎಂ ಹುದ್ದೆಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನವರು ಜಾತಿಗೊಂದು ಡಿಸಿಎಂ ಗುಂಗಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.

 

ದಾಖಲೆಯ ಬಜೆಟ್ ಮಂಡಿಸಿದ ಸಿಎಂಗೆ ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿದ್ದಾರೆ. ನಿನ್ನೆ ಮೂರು ಶಾಸಕರು ಅದ್ಭುತವಾದ ತೀರ್ಮಾನ ಮಾಡಿದ್ದಾರೆ. ಸರ್ಕಾರದ ಈ ರೀತಿಯ ತೀರ್ಮಾನಗಳು ಏನನ್ನು ಸೂಚಿಸುತ್ತವೆ ಹೇಳಿ. ಅದೇನು ಗಂಜಿ ಕೇಂದ್ರಗಳಾ..?25 ವರ್ಷ ಮಂತ್ರಿಯಾಗಿಯೇ ಇದ್ದಂತ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ವಿಜಯ್ ಭಾಸ್ಕರ್ ಅವರ ವರದಿಯನ್ನು ಎಲ್ಲಿ ಹಾಕಿದ್ದೀರಿ ಎಂಬುದನ್ನು ಸ್ವಲ್ಪ ಜನರ ಮುಂದಿಡಿ. ಪಾಪ ಈಗ ತೆಗೆದುಕೊಂಡಯ ಹೋಗಿ ಅವರನ್ನು ಎಲ್ಲಿ ಕೂರಿಸಿ, ಯಾವ ವರದಿ ತಯಾರು ಮಾಡಿಸುತ್ತೀರಿ ಎಂದು ಕೇಳಿದ್ದಾರೆ.

 

ವಿಧಾನಸೌಧದಲ್ಲಿ ಮಾಡಬಾರದ್ದನ್ನು ಮಾಡಿ, ಈಗ ದೇಶಪಾಂಡೆ ಕೈಯಲ್ಲಿ ಏನು ವರದಿಯನ್ನು ತಯಾರು ಮಾಡುತ್ತೀರಿ..? ಬಿ ಆರ್ ಪಾಟೀಲ್ ಅವರನ್ನು ರಾಜಕೀಯ ಸಲಹೆಗಾರರನ್ನಾಗಿ ಮಾಡಿದ್ದೀರಿ. ಸಿಎಂ ಸಿದ್ದರಾಮಯ್ಯ ಅವರಿಗಿಂತ ಹೆಚ್ಚಿನ ರಾಜಕೊಇಯದ ಅನುಭವ ಪಾಟೀಲ್ ಅವರಿಗೆ ಇದೆಯಾ..? ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯದಿಂದ ಎತ್ತಂಗಡಿ‌ಮಾಡುವಂತ ಸ್ಟಾಟರ್ಜಿಯನ್ನು ಬಿ ಆರ್ ಪಾಟೀಲ್ ಅವರು ಹೇಳಿಕೊಟ್ಟಿದ್ದರಾ..? ಅಹಿಂದ ರಾಜಕಾರಣದ ಐಕಾನ್ ಸಿದ್ದರಾಮಯ್ಯ ಅವರು. ಅವರಿಗಿಂತ ರಾಜಕೀಯದಲ್ಲಿ ಅನುಭವಸ್ಥರು ಬೇರೆಯವರು ಇದ್ದಾರಾ..? ಸಿದ್ದರಾಮಣ್ಣ ಅವರೇ ಬಿ ಆರ್ ಪಾಟೀಲ್ ಅವರನ್ನು ರಾಜಕೀಯ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದಕ್ಕೆ ಹ್ಯಾಟ್ಸಾಫ್ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *