ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಯೋಧ್ಯ ಎಂಬ ಪುಸ್ತಕವೊಂದನ್ನು ಬರೆದಿದ್ದಾರೆ. ಅದರಲ್ಲಿ ಹಿಂದುತ್ವವನ್ನು ಐಸಿಸ್ ಗೆ ಹೋಲಿಕೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ಮಧ್ಯೆ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ.
ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಬಗ್ಗೆ ಮಾತನಾಡಿರುವ ಅವರು, ಹತ್ಯಾಕಾಂಡ ಆಗಿದ್ದು ಆಗಿ ಹೋಯಿತು ಅದಕ್ಕೆ ನಾವೇನು ಮಾಡಣಾ ಎಂಬ ಬೇಜಾವಬ್ದಾರಿ ಪ್ರಶ್ನೆ ಮಾಡಿದ್ದಾರೆ. ಖುರ್ಷಿದ್ ಅವರು ಹಿಂದುತ್ವವನ್ನು ಐಸಿಸ್ ಮತ್ತು ಬೋಕೋ ಹರಾಮ್ ನಂಥಹ ಉಗ್ರರ ಮನಸ್ಥಿತಿಗೆ ಹೋಲಿಸಿದ್ದು ಬಹಳಷ್ಟು ವಿರೋಧಕ್ಕೆ ಕಾರಣವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಖುರ್ಷಿದ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.
ಸಲ್ಮಾನ್ ಖುರ್ಷಿದ್ ಈ ರೀತಿ ವಿವಾದ ಸೃಷ್ಟಿಸುತ್ತಿರುವುದು ಇದೇ ಮೊದಲೇನಲ್ಲ. ಈ ಮುಂಚೆ ದೆಹಲಿಯ ಬಾಟ್ಲಾ ಹೌಸ್ ನಲ್ಲಿ ನಡೆದ ಉಗ್ರರ ಎನ್ ಕೌಂಟರ್ ನಡೆ ಬಗ್ಗೆಯೂ ಮಾತನಾಡಿ, ವಿವಾದ ಸೃಷ್ಟಿಸಿದ್ದರು. ಇದೀಗ ಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಖುರ್ಷಿದ್ ಈ ರೀತಿ ಪುಸ್ತಕ ಬರೆದಿರುವುದು ಚರ್ಚೆಗೆ ಕಾರಣವಾಗಿದೆ.
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…
ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…
ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…