ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಮಾಜಿ ಸಿಎಂ ಸಿದ್ದರಾಮಯ್ಯ..!?

suddionenews
1 Min Read

ನವದೆಹಲಿ: ಹೀಗೊಂದು ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ.‌ ಇದಕ್ಕೆಲ್ಲಾ ಕಾರಣ ಸಿದ್ದರಾಮಯ್ಯ ಹಾಗೂ ಸೋನಿಯಾ ಗಾಂಧಿ ಅವರ ಭೇಟಿ. ಹೌದು, ಹೈಕಮಾಂಡ್ ಕರೆಯ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸ ಮಾಡಿದ್ದಾರೆ.. ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿಯೂ ಆಗಿದೆ. ಆ ಭೇಟಿಯಲ್ಲಿ ಆದ ಚರ್ಚೆಗಳು ಈ ಅನುಮಾನ ಹುಟ್ಟು ಹಾಕಿವೆ.

ಇಂದು ಸೋನಿಯಾ ಅವರನ್ನ ದೆಹಲಿ ನಿವಾಸದಲ್ಲಿ ಭೇಟಿಯಾಗಿದ್ದು, ಸುಮಾರು 30 ನಿಮಿಷಗಳ ಕಾಲ ಚರ್ಚಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಜಮೀರ್ ಅಹ್ಮದ್ ಕೂಡ ಸಾಥ್ ನೀಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದತ್ತ ಗಮನ ಹರಿಸಲು ಸೋನಿಯಾ ಅವರು ಹೇಳಿದ್ದಾರೆ ಎನ್ನಲಾಗಿದೆ.

ಸೋನಿಯಾ ಗಾಂಧಿ ಅವರನ್ನ ಭೇಟಿ ಮಾಡೋದಕ್ಕೆ ತೆರಳುವ ಮೊದಲು ಏರ್ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಸಿದ್ದರಾಮಯ್ಯ ಮಾತನಾಡಿದ್ದರು. ಈ ವೇಳೆ, ನಾನು ರಾಷ್ಟರಾಜಕಾರಣಕ್ಕೆ ತೆರಳುವುದಿಲ್ಲ. ನನಗೆ ಅದರಲ್ಲಿ ಆಸಕ್ತಿಯೂ ಇಲ್ಲ. ಸೋನಿಯಾ ಗಾಂಧಿ ಅವರು ಯಾವ ಕಾರಣಕ್ಕೆ ಕರೆದಿದ್ದಾರೆಂಬುದು ನನಗೆ ತಿಳಿದಿಲ್ಲ ಎಂದಿದ್ದರು. ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಚಾರವನ್ನು ತಳ್ಳಿ ಹಾಕಿದ್ರು.

ಇದೀಗ ಎಲ್ಲಾ ಚರ್ಚೆಗಳು ಮುಗಿದಿವೆ. ಚರ್ಚೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಬಲವರ್ಧನೆ ಬಗ್ಗೆಯೂ ಚರ್ಚಿಸಲಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ವರ್ಚಸ್ಸು ಸ್ವಲ್ಪವೂ ಕುಂದಿಲ್ಲ. ಅವರ ಆಡಳಿತಾವಾಧಿಯಲ್ಲಕ ಸಾಕಷ್ಟು ಜನಪರ ಕೆಲಸಗಳನ್ನ ಮಾಡಿದ್ರು. ಹೀಗಾಗಿಯೆ ಅವರನ್ನ ರಾಷ್ಟ್ರ ರಾಜಕಾರಣಕ್ಕೆ ತೆಗೆದುಕೊಂಡು ಹೋಗುವ ಫ್ಲ್ಯಾನ್ ಮಾಡಲಾಗಿದೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *