ಕೆ ಎಚ್ ಮುನಿಯಪ್ಪ ಫೋಟೋ ಇಲ್ಲ ಎಂಬ ಕಾರಣಕ್ಕೆ ಜಗಳವಾಡಿಕೊಂಡ ಕಾಂಗ್ರೆಸ್ ನಾಯಕರು..!

1 Min Read

 

 

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆ ಅವರ ಹುಟ್ಟುಹಬ್ಬವನ್ನು ಸಿದ್ದರಾಮೋತ್ಸವದ ಮೂಲಕ ಅದ್ದೂರಿಯಾಗಿ ಮಾಡಲು ಎಲ್ಲಾ ರೀತಿಯ ಸಕಲ ತಯಾರಿ ನಡೆಯುತ್ತಿದೆ‌. ಅದರ ಪೂರ್ವಭಾವಿ ಸಭೆಯಲ್ಲಿ ಬ್ಯಾನರ್ ನಲ್ಲಿ ಫೋಟೋ ಹಾಕಿಲ್ಲ ಎಂಬ ಕಾರಣಕ್ಕೆ ಜಗಳ ನಡೆದಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮತ್ತು ಕೆ ಎಚ್ ಮುನಿಯಪ್ಪ ಬಣದ ನಡುವೆ ಕಿತ್ತಾಟ ನಡೆದಿದೆ.

ಪೂರ್ವಭಾವಿ ಸಭೆಯಲ್ಲಿ ಹಾಕಿದ್ದ ಬ್ಯಾನರ್ ನಲ್ಲಿ ಕೆ ಎಚ್ ಮುನಿಯಪ್ಪ ಅವರ ಫೋಟೋ ಹಾಕಿರಲಿಲ್ಲ. ಇದೇ ವಿಚಾರಕ್ಕೆ ಜೋರು ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸಿದ್ದಾರೆ. ದೃಶ್ಯ ಸೆರೆ ಹಿಡಿಯುವಾಗ ಪತ್ರಕರ್ತರ ಮೇಲೂ ರೇಗಾಡಿದ ಘಟನೆ ನಡೆದಿದೆ.

ಸಿದ್ದರಾಮಯ್ಯ ಅವರ ಜನ್ಮ ದಿನಾಚರಣೆಯನ್ನು ಈ ಬಾರಿ ಅದ್ಧೂರಿಯಾಗಿ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಹೈಕಮಾಂಡ್ ವರೆಗೂ ಆಹ್ವಾನ ನೀಡಲಾಗಿದೆ. ರಾಹುಲ್ ಗಾಂಧಿ ಸಿದ್ದರಾಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಹ ಸಿದ್ದರಾಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *