Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಟಾಲಿನ್ ವಿರುದ್ಧ ಮಾತನಾಡೋಕೆ ಕಾಂಗ್ರೆಸ್ ನಾಯಕರ ತೊಡೆ ನಡುಗುತ್ತೆ : ಸಂಸದ ಪ್ರತಾಪ್ ಸಿಂಹ

Facebook
Twitter
Telegram
WhatsApp

 

ಮೈಸೂರು: ಕಾವೇರಿ ನೀರು, ಶಿವಮೊಗ್ಗ ಪ್ರಕರಣ ಈ ಎಲ್ಲದರ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಒಂದೊಂದು ಸಲ ರಾಜ್ಯವನ್ನು ಒಳ್ಳೆಯವರು ಆಳುತ್ತಾರೆ, ರಾಕ್ಷಸರು ಆಳುತ್ತಾರೆ. ಈಗ ರಾಕ್ಷಸರ ರಾಜ್ಯಭಾರ ಶುರುವಾಗಿದೆ ಎಂದಿದ್ದಾರೆ.

ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಒಬ್ಬರಾದರೂ ಮಾತನಾಡಿದ್ದಾರಾ..? ಈ ಸರ್ಕಾರಕ್ಕೆ ಬೆನ್ನು ಮೂಳೆಯೇ ಇಲ್ಲ. ಸ್ಟಾಲಿನ್ ಬಗ್ಗೆ ಒಂದು ಹೇಳಿಕೆ ಕೊಡಲಿ ನೋಡೋಣಾ. ಸಿದ್ದರಾಮಯ್ಯ ಎದುರಾಳಿಗಳ ಮೇಲೆ ಉಡಾಫೆಯಿಂದ ಕೂಗಾಡುತ್ತಾರೆ. ಅದೇ ಸ್ಟಾಲಿನ್ ಬಗ್ಗೆ ಯಾಕೆ ಧ್ವನಿ ಎತ್ತುತ್ತಿಲ್ಲ. ಸ್ಟಾಲಿನ್ ಬಗ್ಗೆ ಮಾತನಾಡುವುದಕ್ಕೆ ಕಾಂಗ್ರೆಸ್ ನ ಎಲ್ಲಾ ನಾಯಕರ ತೊಡೆ ನಡುಗುತ್ತದೆ ಎಂದಿದ್ದಾರೆ.

ಇನ್ನು ಶಿವಮೊಗ್ಗ ಗಲಾಟೆ ಬಗ್ಗೆ ಮಾತನಾಡಿ, ಶಿವಮೊಗ್ಗ, ಕೋಲಾರ ಗಲಾಟೆ ನೋಡಿದರೆ ಕರ್ನಾಟಕದಲ್ಲಿ ಒಳ್ಳೆಯವರ ಸರ್ಕಾರ ಹೋಗಿ ರಾಕ್ಷಸರ ಸರ್ಕಾರ ಬಂದಿದೆ ಎಂಬುದು ಗೊತ್ತಾಗುತ್ತದೆ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಹೊರಗೆ ಬಂದು ಚಾಕು, ಚೂರಿ ಇರಿದು ಚುಚ್ಚುವುದು ಹಿಂದೂ ಸಂಸ್ಕೃತಿಯಲ್ಲ.

ಸಿಎಂ ಸಿದ್ದರಾಮಯ್ಯ ಎಲ್ಲಾ ನೋಡಿಯೂ ಕಣ್ಮುಚ್ಚಿ ಕುಳಿತಿದ್ದಾರೆ. ಪಿಎಫ್ಐ ಕೇಸ್ ಗಳನ್ನು ವಾಪಸ್ ಪಡೆದ ನಂತರ ಇಂದು ಇಂಥ ವಿಕೃತಿಗಳು ತಲೆ ಎತ್ತುತ್ತಿವೆ. ಸಿದ್ದರಾಮಯ್ಯ ಅವರೇ ಇದಕ್ಕೆಲ್ಲಾ ಕಾರಣ. ಅವರು ಬಿಗಿಯಾಗಿದ್ದರೆ ಈ ರೀತಿಯೆಲ್ಲಾ ಆಗುತ್ತಿರಲಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!