Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಶ್ವರಪ್ಪನ ವಿರುದ್ಧ ಕೈ ನಾಯಕ ಬೃಹತ್ ಪ್ರತಿಭಟನೆ : ಎಲ್ಲೆಲ್ಲಿ ಜೋರಾಗಿದೆ ಇಲ್ಲಿದೆ ಮಾಹಿತಿ

Facebook
Twitter
Telegram
WhatsApp

ಬೆಂಗಳೂರು: ಚುನಾವಣೆ ಹತ್ತಿರ ಇರುವಾಗಲೇ ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್ ಗೆ ಸ್ಟ್ರಾಂಗ್ ಅಸ್ತ್ರವೊಂದು ಸಿಕ್ಕಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವನ್ನಪ್ಪಿದ್ದು, ಈಶ್ವರಪ್ಪ ಅವರೇ ಕಾರಣ ಎಂದು ಹೇಳಿದ್ದೇ ತಡ ಈಶ್ಚರಪ್ಪ ಬಂಧನಕ್ಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಈಶ್ವರಪ್ಪ ಅರೆಸ್ಟ್ ಆಗಲೇ ಬೇಕು ಎಂದು ಹಠ ಹಿಡಿದಿರುವ ಕಾಂಗ್ರೆಸ್ ನಾಯಕರು, 40% ಕಮಿಷನ್ ವಿಚಾರದಲ್ಲಿ ಇನ್ನು ಎರಡು ವಿಕೆಟ್ ಬೀಳಿಸುವ ಟಾರ್ಗೆಟ್ ಇಟ್ಟುಕೊಂಡಿದ್ದಾರೆ. ಬಳ್ಳಾರಿ, ಶಿವಮೊಗ್ಗ, ರಾಮನಗರ, ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಶ್ವರಪ್ಪ ಮುಖವಾಡ ಧರಿಸಿ ಅಣಕು ಪ್ರದರ್ಶನ ನಡೆಸುತ್ತಿದ್ದಾರೆ.

ಹೊಸ ಪೇಟೆಯ ವಿಜಯನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಚಿತ್ರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರು ಪಿಸ್ತೂಲ್ ಹಿಡಿದುಕೊಂಡು, ಈಶ್ವರಪ್ಪ ಕೈಗೆ ಬೇಡಿ ಹಾಕಿ ಬಂಧಿಸುವಂತೆ ಅಣಕುಪ್ರದರ್ಶನ ನಡೆಸಿದ್ದಾರೆ.

ಇನ್ನು ಶಿವಮೊಗ್ಗದಲ್ಲೂ ಕಾಂಗ್ರೆಸ್ ನಾಯಕರು ಪ್ರತಿಭಟಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈಶ್ವರಪ್ಪ ಅವರ ಮುಖವಾಡ ಧರಿಸಿ, ಕೈಗೆ ಹಗ್ಗ ಹಾಕಿ ಎಳೆದುಕೊಂಡು ಹೋಗುವಂತೆ ಅಣಕು ಪ್ರದರ್ಶನ ಮಾಡಿದ್ದಾರೆ.

ರಾಮನಗರದ ಡಿಸಿ ಕಚೇರಿ ಮುಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ‌ ನೇತೃತ್ವದಲ್ಲಿ ಮೆರವಣಿಗೆ ನಡೆದಿದೆ. ಈಶ್ವರಪ್ಪನನ್ನು ಬಂಧಿಸಲೇಬೇಕೆಂದು ಒತ್ತಾಯಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!