Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಒಂದು ಗುಂಪು ಬಂದರೆ ಬಿಜೆಪಿ ಸರ್ಕಾರ ರಚಿಸುತ್ತಾ : ವಿಜಯೇಂದ್ರ ಹೇಳಿದ್ದೇನು..?

---Advertisement---

ಕಾರವಾರ: ಕಾಂಗ್ರೆಸ್ ನಲ್ಲಿ ಮಂತ್ರಿಗಿರಿ ಮಾತ್ರವಲ್ಲ ಸಿಎಂ ಕುರ್ಚಿಗಾಗಿಯೇ ಗುದ್ದಾಟ ನಡೀತಾ ಇದೆ. ಒ.ಮದು ವೇಳೆ ಅಧಿಕಾರಕ್ಕೆ ಆಸೆ ಪಡುವವರು ಬಿಜೆಪಿಗೆ ಬಂದ್ರೆ ಅಂದ್ರೆ ಒಂದು ಗುಂಪು ಬಿಜೆಪಿಗೆ ಬಂದ್ರೆ ಸರ್ಕಾರ ರಚಿಸ್ತೀರಾ ಎಂಬ ಪ್ರಶ್ನೆಗೆ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವನ್ನ ನೀಡಿದ್ದಾರೆ. ಬಿಜೆಪಿಯನ್ನ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ವಿಪಕ್ಷದವರಾಗಿ ಸರ್ಕಾರವನ್ನು ಕಿವಿ ಹಿಂಡುವ ಕೆಲಸವನ್ನ ಮಾಡ್ತಾ ಇದ್ದೇವೆ. ಮುಂದೆಯೂ ಮಾಡ್ತೇವೆ. ಯಾವುದೇ ಕಾರಣಕ್ಕೂ ಸರ್ಕಾರ ಮಾಡುವುದಕ್ಕೆ ಆಸಕ್ತಿ ಇಲ್ಲ ಎಂದಿದ್ದಾರೆ.

ಇದೆ ವೇಳೆ ಸರ್ಕಾರದ ಯೋಜನೆಗಳಿಗೂ ರಾಜ್ಯ ಸರ್ಕಾರ ಯಾವುದೇ ರೀತಿಯ ಬೆಂಬಲ ನೀಡದೆ, ಕೆಲಸಗಳು ಹಾಗೇ ನಿಲ್ಲುತ್ತಿವೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ದೊಡ್ಡ ಷಡ್ಯಂತ್ರ, ಕುತಂತ್ರ ಇದು. ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳನ್ನು ಸರಿಯಾದ ರೀತಿ ಅನುಷ್ಠಾನ ಮಾಡದೆ, ನಿಮಗೆಲ್ಲಾ ಗೊತ್ತಿದೆ ಈ ಹಿಂದಿನ ಪದ್ಧತಿ ಬದಲಾಗಿದೆ. ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆಯಾಗಬೇಕಾದ್ರೆ ರಾಜ್ಯ ಸರ್ಕಾರ ಅದರ ಪ್ರೋಗ್ರೆಸ್ ಕಾರ್ಡ್ ಅನ್ನ ನೀಡಬೇಕಾಗಿರುತ್ತದೆ. ಕೇಂದ್ರಕ್ಕೆ ಯಾವುದೇ ವರದಿಯನ್ನು ನೀಡದೆ, ಕೇಂದ್ರ ಸರ್ಕಾರ ಹಣ ನೀಡ್ತಾ ಇಲ್ಲ ಅಂತ ಆರೋಪ ಮಾಡಿದ್ರೆ ಅದಕ್ಕೆ ಕಾರಣ ರಾಜ್ಯ ಸರ್ಕಾರವೆ. ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ವಿ ಹಾಕಿಕೊಳ್ಳುವುದಕ್ಕೆ ಪದೇ ಪದೇ ಕೇಂದ್ರ ಸರ್ಕಾರವನ್ನು ದೂಷಿಸುತ್ತಾ ಇರುವುದು ನಿರಂತರವಾಗಿ ನಡೆದುಕೊಂಡು ಬರುತ್ತಾ ಇದೆ ಎಂದಿದ್ದಾರೆ.

ಇದೆ ವೇಳೆ ಶಾಸಕ ಯತ್ನಾಳ್ ಮತ್ತೆ ಬಿಜೆಪಿಗೆ ಬರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯತ್ನಾಳ್ ಅವರು ಸಭೆ ನಡೆಸುವುದು ಬಿಡುವುದು ಅವರ ವೈಯಕ್ತಿಕ ವಿಚಾರ. ಹಾಗೇ ಹೈಕಮಾಂಡ್ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ಮಾತನ್ನ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now