ಅಧಿವೇಶನದಲ್ಲಿ ರಮೇಶ್ ಕುಮಾರ್ ಹೇಳಿಕೆಗೆ  ಕಾಂಗ್ರೆಸ್ ಉಸ್ತುವಾರಿ ಹೇಳಿದ್ದೇನು ..?

ಬೆಂಗಳೂರು: ಸದನದಲ್ಲಿ ನಿನ್ನೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಬೆನ್ನಲ್ಲೇ ರಮೇಶ್ ಕುಮಾರ್ ಸದನದಲ್ಲೇ ಕ್ಷಮೆಯನ್ನು ಯಾಚಿಸಿದ್ದಾರೆ. ಇದೀಗ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ನಲ್ಲಿ ಸ್ಪೀಕರ್ ಹಾಗೂ ಕಾಂಗ್ರೆಸ್ ಶಾಸಕನ ವಿರುದ್ಧವೂ ಹರಿಹಾಯ್ದಿದ್ದಾರೆ. ಹಿರಿಯ ಕಾಂಗ್ರೆಸ್ ಶಾಸಕರಿಂದ ವ್ಯಕ್ತವಾದ ಹೆಚ್ಚು ಆಕ್ಷೇಪಾರ್ಹ ಮತ್ತು ಮತಿಹೀನ ಹೇಳಿಕೆ ಹಾಗೂ ಅದಕ್ಕೆ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಪ್ರತಿಕ್ರಿಯಿಸಿದ ರೀತಿಯನ್ನು ಕಾಂಗ್ರೆಸ್ ಪಕ್ಷವು ಒಪ್ಪುವುದಿಲ್ಲ.

ಸಭಾಧ್ಯಕ್ಷರು ಮತ್ತು ಹಿರಿಯ ಶಾಸಕರು ಮಾದರಿಯಾಗಿರಬೇಕು. ಅಂತಹ ಸ್ವೀಕಾರಾರ್ಹವಲ್ಲದ ನಡವಳಿಕೆಯಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. ಸದನದಲ್ಲಿ ಈ ಕುರಿತು ರಮೇಶ್ ಕುಮಾರ್ ಕ್ಷಮೆಯನ್ನು ಕೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *