ಸಿ.ಎಂ ಬದಲಾವಣೆಯ ಕುರಿತಾದ ಪಕ್ಷದ ಒಳಗಿನ ಗುಟ್ಟನ್ನು ರಟ್ಟು ಮಾಡಿದ ಕಾಂಗ್ರೆಸ್ ಶಾಸಕ!

1 Min Read

ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ ಹಾಗೂ ಪಕ್ಷದ ಒಳಗಿನ ಗುಟ್ಟನ್ನು ರಟ್ಟು ಮಾಡಿದ್ದಾರೆ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ. ದಾವಣಗೆರೆ ಕಾರ್ಯಕ್ರಮದಲ್ಲಿ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ, ಡಿಸಿಎಂ ಡಿಕೆ ಶಿವಕುಮಾರ್ (ಡಿಕೆಶಿ) ಅವರನ್ನು ಬೆಂಬಲಿಸುವ ಕುರಿತು ಮಾತನಾಡಿದ ಮಾತುಗಳು ಈಗ ಎಲ್ಲೆಡೆ ವೈರಲ್ ಆಗುತ್ತಿವೆ.


ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಈಗಾಗಲೇ ಒಪ್ಪಂದ ಆಗಿದೆ. ಇದು ನನಗೆ ಲಭಿಸಿರುವ ಖಚಿತ ಮಾಹಿತಿ ಎಂದು ಶಾಸಕ ಶಿವಗಂಗಾ ಹೇಳಿದ್ದಾರೆ. ಹೈಕಮಾಂಡ್ ಇದನ್ನು ಸಾರ್ವಜನಿಕವಾಗಿ ಹೇಳದೇ ಇರಬಹುದು, ಆದರೆ ಒಳಗೆ ಒಪ್ಪಂದವಾಗಿದೆ ಎಂಬ ಮಾಹಿತಿ ಬಹಿರಂಗವಾಗಿ ನೀಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ 139 ಶಾಸಕರ ಬೆಂಬಲ ಇದೆ. ನಮ್ಮಂತ 40 ರಿಂದ 50 ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಿದ್ದೇವೆ. ಡಿಕೆಶಿ ಪ್ರಾಣ ಕೇಳಿದರೂ ಕೊಡೋಕೆ ನಾವು ರೆಡಿ ಎಂದು ಬಸವರಾಜ್ ಹೇಳಿದ್ದಾರೆ.

Share This Article
Enable Notifications OK No thanks