ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.11 : ಒಡಿಸ್ಸಾದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಕೋಟ್ಯಾಂತರ ರೂ.ಗಳ ಅಕ್ರಮ ಎಸಗಿರುವುದನ್ನು ಖಂಡಿಸಿ ಭಾರತೀಯ ಜನತಾಪಾರ್ಟಿ ಜಿಲ್ಲಾ ಘಟಕದಿಂದ ಸೋಮವಾರ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ಧೀರಜ್ಸಾಹು ಬಳಿ ಸಿಕ್ಕಿರುವ ಹಣವನ್ನು ನಲವತ್ತರಿಂದ ಐವತ್ತು ಯಂತ್ರಗಳ ಮೂಲಕ ನೂರ ಐವತ್ತು ಮಂದಿ ಆರು ದಿನಗಳಿಂದ ಎಣಿಸುತ್ತಿದ್ದರೂ ಇನ್ನು ಪೂರ್ತಿಯಾಗಿಲ್ಲ. ಇದುವರೆವಿಗೂ 354 ಕೋಟಿ ರೂ.ಗಳು ಪತ್ತೆಯಾಗಿರುವುದನ್ನು ನೋಡಿದರೆ ಕಾಂಗ್ರೆಸ್ ಲೂಟಿಕೋರ, ಭ್ರಷ್ಠ ಸರ್ಕಾರ ಎನ್ನುವುದು ಗೊತ್ತಾಗುತ್ತದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಇಂತಹ ದೊಡ್ಡ ಭ್ರಷ್ಠಾಚಾರ ನಡೆದಿರುವುದನ್ನು ಇದುವರೆವಿಗೂ ದೇಶದ ಜನ ಕಂಡಿರಲಿಲ್ಲ. ಕೂಲಂಕುಶ ತನಿಖೆಯಾಗಬೇಕೆಂದು ಒತ್ತಾಯಿಸಿದರು.
ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಸಂಪತ್ಕುಮಾರ್, ನಗರಾಧ್ಯಕ್ಷ ನವೀನ್ಚಾಲುಕ್ಯ, ಕಲ್ಲೇಶಯ್ಯ ಕೆ. ಮಲ್ಲಿಕಾರ್ಜುನ್, ಗೌರಣ್ಣ, ವೆಂಕಟೇಶ್ಯಾದವ್, ಡಿ.ಕೆ.ಜಯಣ್ಣ, ಎಲ್.ವಿ.ಪ್ರಶಾಂತ್, ನಾಗರಾಜ್ಬೇದ್ರೆ, ದಗ್ಗೆಶಿವಪ್ರಕಾಶ್, ನಂದಿ ನಾಗರಾಜ್, ತಿಪ್ಪೇಸ್ವಾಮಿ, ಕಿಟ್ಟಿ, ಕಿರಣ, ಶಂಭು, ಅನಿಲ್ಭರತ್, ಕುಮಾರ್, ರಾಮು, ಚಂದ್ರು, ಉಷಾ ಬೇದ್ರೆ, ಕವನ, ವೀಣ, ಹರೀಶ್, ಅನಿಲ್ಕುಮಾರ್ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















