Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸಂಸದ ಧೀರಜ್ ಸಾಹು  ಕೋಟ್ಯಾಂತರ ರೂಪಾಯಿ ಅಕ್ರಮ ಹಣ ಪತ್ತೆ : ಚಿತ್ರದುರ್ಗದಲ್ಲಿ ಬಿಜೆಪಿ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.11 : ಒಡಿಸ್ಸಾದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಕೋಟ್ಯಾಂತರ ರೂ.ಗಳ ಅಕ್ರಮ ಎಸಗಿರುವುದನ್ನು ಖಂಡಿಸಿ ಭಾರತೀಯ ಜನತಾಪಾರ್ಟಿ ಜಿಲ್ಲಾ ಘಟಕದಿಂದ ಸೋಮವಾರ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ಧೀರಜ್‍ಸಾಹು ಬಳಿ ಸಿಕ್ಕಿರುವ ಹಣವನ್ನು ನಲವತ್ತರಿಂದ ಐವತ್ತು ಯಂತ್ರಗಳ ಮೂಲಕ ನೂರ ಐವತ್ತು ಮಂದಿ ಆರು ದಿನಗಳಿಂದ ಎಣಿಸುತ್ತಿದ್ದರೂ ಇನ್ನು ಪೂರ್ತಿಯಾಗಿಲ್ಲ. ಇದುವರೆವಿಗೂ 354 ಕೋಟಿ ರೂ.ಗಳು ಪತ್ತೆಯಾಗಿರುವುದನ್ನು ನೋಡಿದರೆ ಕಾಂಗ್ರೆಸ್ ಲೂಟಿಕೋರ, ಭ್ರಷ್ಠ ಸರ್ಕಾರ ಎನ್ನುವುದು ಗೊತ್ತಾಗುತ್ತದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಇಂತಹ ದೊಡ್ಡ ಭ್ರಷ್ಠಾಚಾರ ನಡೆದಿರುವುದನ್ನು ಇದುವರೆವಿಗೂ ದೇಶದ ಜನ ಕಂಡಿರಲಿಲ್ಲ. ಕೂಲಂಕುಶ ತನಿಖೆಯಾಗಬೇಕೆಂದು ಒತ್ತಾಯಿಸಿದರು.

ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಸಂಪತ್‍ಕುಮಾರ್, ನಗರಾಧ್ಯಕ್ಷ ನವೀನ್‍ಚಾಲುಕ್ಯ, ಕಲ್ಲೇಶಯ್ಯ ಕೆ. ಮಲ್ಲಿಕಾರ್ಜುನ್, ಗೌರಣ್ಣ, ವೆಂಕಟೇಶ್‍ಯಾದವ್, ಡಿ.ಕೆ.ಜಯಣ್ಣ, ಎಲ್.ವಿ.ಪ್ರಶಾಂತ್, ನಾಗರಾಜ್‍ಬೇದ್ರೆ, ದಗ್ಗೆಶಿವಪ್ರಕಾಶ್, ನಂದಿ ನಾಗರಾಜ್, ತಿಪ್ಪೇಸ್ವಾಮಿ, ಕಿಟ್ಟಿ, ಕಿರಣ, ಶಂಭು, ಅನಿಲ್‍ಭರತ್, ಕುಮಾರ್, ರಾಮು, ಚಂದ್ರು, ಉಷಾ ಬೇದ್ರೆ, ಕವನ, ವೀಣ, ಹರೀಶ್, ಅನಿಲ್‍ಕುಮಾರ್ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!