ಕಾಂಗ್ರೆಸ್ ಪಕ್ಷಕ್ಕೆ ಹಿಂದುಳಿದ ವರ್ಗಗಳಿಂದ ಶಕ್ತಿ ಬಂದಿದೆ : ಮಧು ಬಂಗಾರಪ್ಪ

 

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್,                         ಮೊ : 87220 22817

ಚಿತ್ರದುರ್ಗ,(ನ.01) : ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಓಬಿಸಿ ಸಮಾವೇಶವನ್ನು ಮಾಡುವುದರ ಮೂಲಕ ಪಕ್ಷದ ಸಂಘಟನೆ ಮಾಡಲಾಗುವುದೆಂದು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.

ನಗರದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಹಿಂದುಳಿದ ವರ್ಗಗಳಿಂದ ಶಕ್ತಿ ಬಂದಿದೆ. ಚಿಕ್ಕ ಚಿಕ್ಕ ಸಮಾಜವನ್ನು ಗುರುತಿಸಿ ಅವರನ್ನು ಮುಕ್ಯವಾಹಿನಿಗೆ ತರುವಂತ ಕಾರ್ಯವನ್ನು ಮಾಡಬೇಕಿದೆ. ಯಾವ ಸಮಾಜವೂ ಸಹಾ ನಿರ್ಲಕ್ಷಕ್ಕೆ ಒಳಗಾಗಬರದೆಂದು ನಮ್ಮ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯವಾರು ಪ್ರವಾಸವನ್ನು ಮಾಡುವುದರ ಮೂಲಕ ಜಿಲ್ಲಾ ಓಬಿಸಿ ಘಟಕವನ್ನು ಜಾಗೃತಿ ಮಾಡಲಾಗುವುದು ಎಂಧರು.

ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ತುಂಬಾ ಫಲ ಪ್ರದವಾಗಿದೆ. ಅವರ ಮೇಲೆ ಇಲ್ಲ ಸಲ್ಲದ ಅವಹೇಳನಕಾರಿ  ಮಾತುಗಳನ್ನಾಡುವವರಿಗೆ ಈ ಯಾತ್ರೆ ಉತ್ತರವನ್ನು ನೀಡಿದೆ. ಇದರಲ್ಲಿ ಆಗಮಿಸಿ ಜನ ಜಾತ್ರೆಯನ್ನು ಕಂಡು ಬೇರೆಯವರು ಕಂಗಾಲಾಗಿದ್ದಾರೆ. ಉತ್ತಮವಾದ ಬೆಂಬಲ ಈ ಯಾತ್ರೆಗೆ ಕರ್ನಾಟಕದಲ್ಲಿ ವ್ಯಕ್ತವಾಗಿದೆ. ದೇಶದ ಬಗ್ಗೆ ಕಾಳಜಿಯನ್ನು ಇಟ್ಟುಕೊಂಡು ರಾಹುಲ್ ರವರು ಈ ಯಾತ್ರೆಯನ್ನು ಕೈಗೊಂಡಿದ್ದಾರೆ. ಇದರಿಂದ ಪಕ್ಷಕ್ಕೆ ಶಕ್ತಿ ಬಂದಿದೆ. ಮಂದಿನ ದಿನದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ರಾಹುಲ್ ರವರು ಮಾನವೀಯತೆಯ ನಡಿಗೆ ಇದಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಾತಿಯನ್ನು ನೋಡಿ ಯಾವುದೇ ಯೋಜನೆಯನ್ನು ಜಾರಿ ಮಾಡಿಲ್ಲ, ಬಡವರನ್ನು ನೋಡಿ ದೇವರಾಜು ಅರಸುರಿಂದ ಹಿಡಿದು ಸಿದ್ದರಾಮಯ್ಯ ರವರೆಗೂ ಬಡವರಿಗಾಗಿಯೇ ವಿವಿಧ ರೀತಿಯ ಯೋಜನೆಯನ್ನು ರೂಪಿಸಲಾಗಿದೆ. ಇಂದಿನ ಸರ್ಕಾರ 40 ಪಸೆಂರ್ಟ್ ಕಮಿಷನ್ ಸರ್ಕಾರವಾಗಿದೆ. ಹಲವಾರು ಹಗರಣಗಳನ್ನು ಮಾಡಿದೆ, ಮುಖ್ಯಮಂತ್ರಿಗಳಾದವರು ಆಡಬಾರದ ಮಾತನ್ನು ಆಡಿದ್ದಾರೆ. ಜನತೆಗೆ ಸಹಾಯವನ್ನು ಮಾಡದ ಸರ್ಕಾರ ಜನತೆ, ಜಾತಿ, ಧರ್ಮದ ಮಧ್ಯೆ ದ್ವೇಷವನ್ನು ಬಿತ್ತುವ ಕಾರ್ಯವನ್ನು ಮಾಡುತ್ತಿದೆ. ಇಂತಹ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತು ಹಾಕಬೇಕಿದೆ.

ಇದರ ಬಗ್ಗೆ ಮತದಾರರು ಜಾಗೃತರಾಗಬೇಕಿದೆ ಎಂದು ಹೇಳಿದರು
ರಾಜ್ಯದಲ್ಲಿ ಜನವರಿ ಒಳಗಾಗಿ ಜಿಲ್ಲಾ ಮಟ್ಟದ ಓಬಿಸಿ ಸಮಾವೇಶವನ್ನು ಪೂರ್ಣಗೊಳಿಸಿ ನಂತರ ರಾಜ್ಯ ಮಟ್ಟದ ಸಮಾವೇಶವನ್ನು ಬೆಂಗಳೂರನ್ನು ಹೊರೆತುಪಡಿಸಿ ಬೇರೆ ಕಡೆಯಲ್ಲಿ ಮಾಡಲಾಗುವುದು. ಬಿಜೆಪಿಯವರಿಗೆ ಓಬಿಸಿ ಸಮಾವೇಶ ಮಾಡಲು ಯೋಗ್ಯತೆ ಇಲ್ಲ ಅ ಪಕ್ಷದಿಂದ ಈ ವರ್ಗಕ್ಕೆ ಯಾವುದೇ ರೀತಿಯ ಕೂಡುಗೆ ಇಲ್ಲ, ಚುನಾವಣೆ ಸಮಯದಲ್ಲಿ ಮಾತ್ರವೇ ಅವರು ನೆನಪಾಗುತ್ತಾರೆ, ಬಂಗಾರಪ್ಪರವರ ಅಭೀಮಾನಿಗಳು ಬೇರೆ ಪಕ್ಷದಲ್ಲಿ ಇದ್ದಾರೆ ಅವರು ಕಾಂಗ್ರೇಸ್ ಪಕ್ಷಕ್ಕೆ ಬನ್ನಿ ಎಂಬ ಮನವಿಯನ್ನು ಮಾಡುತ್ತೇನೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ನ.06 ಕ್ಕೆ ಕನಾಟಕಕ್ಕೆ ಖರ್ಗೆ ; ಅಖಿಲ ಭಾರತ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜನ ಖರ್ಗೆಯವರು ಪ್ರಥಮ ಭಾರಿಗೆ ನ.06ಕ್ಕೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಅಂದು ಅವರನ್ನು ಭವ್ಯವಾದ ಸ್ವಾಗತದೊಂದಿಗೆ ಬರ ಮಾಡಿಕೊಳ್ಳಲಾಗುವುದು. ಖರ್ಗೆ ಅಧ್ಯಕ್ಷರಾಗಿರುವುದಿಂದ ಪಕ್ಷಕ್ಕೆ ಮ್ತತಷ್ಟು ಶಕ್ತಿ ಬಂದಿದೆ, ಇದರಿಂದ ಕರ್ನಾಟಕ ರಾಜ್ಯಕ್ಕೂ ಸಹಾ ಶಕ್ರಿ ಬಂದಿದೆ ಎಂದರು.

ಗೋಷ್ಠಿಯಲ್ಲಿ ಶಾಸಕರಾದ ರಘುಮೂರ್ತಿ, ಜಿಲ್ಲಾಧ್ಯಕ್ಷ ತಾಜ್‍ಪೀರ್, ಕಾರ್ಯಾಧ್ಯಕ್ಷರಾದ ಹಾಲೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ಶ್ರೀಮತಿ ಜಯ್ಯಮ್ಮ ಬಾಲರಾಜ್, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಗೀತಾ ನಂದಿನಿಗೌಡ, ಓಬಿಸಿ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಮುಖಂಡರಾದ ಕುಮಾರ್ ಗೌಡ, ನಾಗವೇಣಿ, ಮೈಲಾರಪ್ಪ, ಬಾಲಕೃಷ್ಣ ಯಾದವ್, ಪ್ರಕಾಶ್ ಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

46 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago