ನೂರು ಚಪ್ಪಲಿ ಏಟು ತಿನ್ನಬಹುದು, ದುಡ್ಡಿನೇಟು ಅಲ್ಲ : ಡಿಕೆ ಶಿವಕುಮಾರ್

 

ಬೆಂಗಳೂರು: ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆಗಿಳಿದಿದ್ದಾರೆ. ಸಿಲಿಂಡರ್ ಗೆ ನಮಸ್ಕಾರ ಮಾಡಿ, ಅದನ್ನ ತಲೆ‌ಮೇಲೆ ಹೊತ್ತು ವಿನೂತನವಾಗಿ ಪ್ರತಿಭಟಿಸುತ್ತಿದ್ದಾರೆ.

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾರ್ಚ್ 31 ಆರ್ಥಿಕ ವರ್ಷ ಮುಕ್ತಾಯ. 11 ದಿನದಲ್ಲಿ 10 ಬಾರಿ ಬೆಲೆ ಏರಿಕೆ ಮಾಡಿದ್ದಾರೆ. ಇವತ್ತೆ ಯಾಕೆ ಆಯ್ಕೆ ಮಾಡಿದ್ದೀವಿ ಅಂದ್ರೆ, ಇವತ್ತಿಗೆ ಈ ವರ್ಷದ ಲೆಕ್ಕ ಬರುತ್ತೆ. ನಮಗೆ ದಿನಾ ಪುಕ್ ಪಾಕೇಟ್ ಆಗುತ್ತಾ ಇದೆ. ಪ್ರತಿಯೊಬ್ಬರ ಆದಾಯವನ್ನ ಡಬ್ಬಲ್ ಮಾಡ್ತೀವಿ ಅಂತ ಬಿಜೆಪಿ ಸರ್ಕಾರ ಹೇಳಿದ್ರು.

 

ಬೆಲೆ ಏರಿಕೆ ಗಗನಕ್ಕೇರಿದೆ. ಆದಾಯ ಪಾತಾಳಕ್ಕೆ ಹೋಗಿದೆ. ಎಲ್ಲರೂ ನೋವು ಅನುಭವಿಸುತ್ತಿದ್ದಾರೆ. ಈಗಾಗಲೇ ಸುಮಾರು 110 ರೂಪಾಯಿ‌ ಮುಟ್ಟಿದೆ. ಇದನ್ನ ವಿರೋಧಿಸಿಯೆ ನಾವೂ ಪ್ರತಿಭಟಿಸುತ್ತಿದ್ದೇವೆ. ಕಾಂಗ್ರೆಸ್ ಕಚೇರಿ ಮುಂದೆ ನಾವೆಲ್ಲರೂ ಪ್ರತಿಭಟನೆ ಶುರು ಮಾಡಿದ್ದೇವೆ.

ನಮ್ಮ ಕರ್ನಾಟಕ ರಾಜ್ಯದ ಜನ ದಡ್ಡರಲ್ಲ. ಅವಕಾಶಕ್ಕಾಗಿ ಕಾಯ್ದುಕೊಂಡಿದ್ದಾರೆ. ಜನರಿಗೆ ಇರುವ ನೋವು ಮತ ಹಾಕುವಾಗ ಹೊರ ಬರುತ್ತೆ, ಬಿಜೆಪಿ ಸರ್ಕಾರವನ್ನ ಕಿತ್ತೊಗೆಯೋ ಮೂಲಕ ಹೊರ ಬರಲಿದೆ. ಕಾಂಗ್ರೆಸ್ ಪಕ್ಷ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಜನಕ್ಕಂತು ಪ್ರಾಣ ಹಿಂಡುತ್ತಿದ್ದಾರೆ. ನೂರು ಚಪ್ಪಲಿ ಏಟು ತಿಂದರು ದುಡ್ ಏಟನ್ನ ತಿನ್ನೋದಕ್ಕೆ ಆಗಲ್ಲ. ಜನರ ಜೀವನದ ಜೊತೆಗೆ ಆಟ ಆಡ್ತಾ ಇದ್ದಾರೆ. ಸಮಾಜವನ್ನ ಹೊಡೆಯುವ ಕೆಲಸ ಅವರದ್ದು ಆದ್ರೆ ನಮ್ಮದು ಸಮಾಜವನ್ನ ಒಟ್ಟುಗೂಡಿಸುವಂತ ಕೆಲಸವಾಗುತ್ತಿದೆ ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago