Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನವರು ಅಲ್ಲಿ ಮರ ಇಟ್ಟು, ಪ್ರತಾಪ್ ಸಿಂಹ ಅವರ ತಮ್ಮನ್ನ ಸಿಕ್ಕಿ ಹಾಕಿಸಿದ್ರಾ..? ಸಚಿವ ರಾಜಣ್ಣ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಇನ್ನು ನಿಗಮ ಮಂಡಳಿ ಸ್ಥಾನಗಳು ಫೈನಲ್ ಆಗಿಲ್ಲ. ಈ ವಿಚಾರವಾಗಿ‌ ಮಾತನಾಡಿರುವ ಸಚಿವ ರಾಜಣ್ಣ, ನಿಗಮ ಮಂಡಳಿದು 4-5ರಂದು ಸಿಎಂ ಮತ್ತು ಡಿಸಿಎಂ ಹೋಗುತ್ತಾ ಇದ್ದಾರೆ. ಲೋಕಸಭಾ ಅಭ್ಯರ್ಥಿಗಳ ಬಗ್ಗೆಯೂ ಚರ್ಚೆ ಮಾಡುತ್ತಾರೆ, ನಿಗಮ ಮಂಡಳಿಗಳ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಬಳಿಕ ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಕಾರ್ಯಕರ್ತರಿಂದ ತಾನೇ ನಾವೆಲ್ಲ ಶಾಸಕರಾಗುವುದು. ಕಾರ್ಯಕರ್ತರಿಗೂ ಸ್ಥಾನ ಸಿಗಬೇಕು. ಶಾಸಕರು ಹಾಗೂ ಕಾರ್ಯಕರ್ತರಿಗೆ ನೀಡಿ ಸಮತೋಲನ ಕಾಪಾಡಬೇಕಿದೆ ಎಂದಿದ್ದಾರೆ.

ಇದೆ ವೇಳೆ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನದ ಬಳಿಕ ಮಗನ ಮೇಲಿನ ಪ್ರೀತಿಗಾಗಿ ಈ ರೀತಿ ಮಾಡಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ರಾಜಣ್ಣ ಅವರು, ಅವರ ತಮ್ಮ ಕಳ್ಳ ಎಂಬುದು ಈಗಾಗಲೇ ಆರೋಪ ಸಾಬೀತಾಗಿದೆ. ಅಂಥವರಿಗೆ ಇವರು ಬೆಂಬಲ ಕೊಡುತ್ತಾರೆ ಅಂತ ನಾವೂ ಭಾವಿಸಬಹುದಾ..? ಮರಗಳ್ಳರಿಗೆ ಪದರತಾಪ್ ಸಿಂಹ ಬೆಂಬಲ ಅಂತ ಹೇಳಬಹುದಲ್ಲವಾ..? ಯಾವುದೋ ಕಾರಣಕ್ಕೆ ಯಾರನ್ನೋ ಟೀಕೆ ಮಾಡುವುದು ಸರಿಯಲ್ಲ. ಕಾನೂನು ಕ್ರಮ ಜಾರಿ ಇದೆ. ಅದೆಲ್ಲವನ್ನು ಕೋರ್ಟ್ ನೋಡಿಕೊಳ್ಳುತ್ತದೆ.

ಕಾಂಗ್ರೆಸ್ ನವರು ಅಲ್ಲಿ ಮರ ತೆಗೆದುಕೊಂಡು ಹೋಗಿ ಇಟ್ಟು, ಅವರ ತಮ್ಮನ್ನೋ, ಅಣ್ಣನ್ನೋ ಸಿಕ್ಕಿ ಹಾಕಿಸಿದ್ದಾರಾ..? ಅವರೇ ಕತ್ತರಿಸಿದ್ದಾರೆ, ಅವರೆ ಸಿಕ್ಕಿ ಹಾಕಿಕೊಂಡಿದ್ದಾರೆ. ರಾಜಕೀಯ ಪ್ರೇರಿತ ಅಂದರೆ ನೀವೂ ಒಪ್ಪುತ್ತೀರಾ ಅದನ್ನೇ ಹೇಳಿ. ಯಾರೇ ತಪ್ಪನ್ನು ಮಾಡಿರಲಿ. ಕಾಂಗ್ರೆಸ್ ಪಕ್ಷದವರೇ ಮಾಡಿದರಲಿ, ಇನ್ನೊಂದು ಪಕ್ಷದವರೇ ಮಾಡಿರಲಿ. ಕಾನೂನು ಎಲ್ಲರಿಗೂ ಒಂದೇ. ಕಾನೂನಿನಲ್ಲಿ ಯಾರೂ ತಪ್ಪಿತಸ್ಥರು ಎಂದು ಪ್ರೂವ್ ಆಗುತ್ತೋ, ಅದು ಆಕ್ಷನ್ ತೆಗೆದುಕೊಳ್ಳುತ್ತದೆ ಎಂದಹ ಸಚಿವ ರಾಜಣ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

error: Content is protected !!