Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಬ್ಬ ಸಚಿವ ನಿದ್ದೆ ಮಾಡಿದರೆ, ಇನ್ನೊಬ್ಬ ಸಂಸದ ದೋಸೆ ತಿನ್ನುತ್ತಿದ್ದಾನೆ.. ಇದನ್ನು ಕಾಂಗ್ರೆಸ್ ಹೇಳಿತ್ತೆ : ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

Facebook
Twitter
Telegram
WhatsApp

 

ಬೆಂಗಳೂರು: ಮಳೆಯಿಂದಾಗಿ ಬೆಂಗಳೂರಿನ ವರ್ತೂರು, ಬಿಟಿಎಂ ಲೇಔಟಗ ಕಡೆಯೆಲ್ಲಾ ಸಮುದ್ರದಂತಾಗಿದೆ. ಈ ಅವಾಂತರಕ್ಕೆ ಕಾಂಗ್ರೆಸ್ ಮಾಡಿದ ರಾಜಕಾಲುವೆ ಒತ್ತುವರಿಯೇ ಕಾರಣ ಎಂದು ಸಿಎಂ ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ಟ್ವೀಟ್ ಮಾಡಿ ಹರಿಹಾಯ್ದಿದೆ.

ಸಿಎಂ ಬೊಮ್ಮಾಯಿ ಅವರೆ ಕಳೆದ ವರ್ಷವೇ ರಾಜಕಾಲುವೆ ಅಭಿವೃದಿಗಾಗಿ ₹1500 ಕೋಟಿ ಘೋಷಿಸಿದ್ದಿರಿ, ಆದರೆ ಕೊಟ್ಟಿದ್ದು ₹400 ಕೋಟಿ ಮಾತ್ರ. ಅದರಲ್ಲೂ ಈಗ ಟೆಂಡರ್ ಪ್ರಕ್ರಿಯೆ ಶುರು ಮಾಡಿದ್ದೀರಿ. ಈ ವಿಳಂಬ ಮಾಡಲು ಕಾಂಗ್ರೆಸ್ ಹೇಳಿತ್ತೆ? ಉಳಿದ ₹1100 ಕೋಟಿಯನ್ನು ಏಕೆ ಬಿಡುಗಡೆ ಮಾಡಲಿಲ್ಲ? ರಾಜಕಾಲುವೆ ಅಭಿವೃದ್ಧಿ ನಿಮಗೆ ಬೇಕಿರಲಿಲ್ಲ ಅಲ್ಲವೇ?.

ಬೆಂಗಳೂರಿನ ಅವಾಂತರಕ್ಕೆ ಕಾಂಗ್ರೆಸ್‌ನ್ನು ದೂಷಿಸುವ ಸಿಎಂ ಮಾತು ‘ಕುಣಿಲಾರದವರು ನೆಲ ಡೊಂಕು’ ಎನ್ನುವಂತಿದೆ. ಬೆಂಗಳೂರಿಗೆ ಐಟಿ ಸಿಟಿ, ಸಿಲಿಕಾನ್ ವ್ಯಾಲಿ ವಿಶೇಷಣಗಳು ಸಿಕ್ಕಿದ್ದು ಕಾಂಗ್ರೆಸ್ ಶ್ರಮದಿಂದ, ಇದ್ದನ್ನು ಸಿಎಂ ಅರ್ಥ ಮಾಡಿಕೊಳ್ಳಲಿ. ಇಂತಹ ಭವ್ಯ ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ್ದು ನಿಮ್ಮ 50% ಕಮಿಷನ್ ದಾಹ ಅಲ್ಲವೇ.

ಬೊಮ್ಮಾಯಿ ಅವರೇ, ಅಧಿಕಾರದಲ್ಲಿದ್ದು ಕಾಂಗ್ರೆಸ್ ದೂಷಣೆ ಮಾಡುವ ಬದಲು ನಿಮ್ಮವರು ಏನು ಮಾಡ್ತಿದಾರೆ ನೋಡಿಕೊಳ್ಳಿ. ಒಬ್ಬ ಸಚಿವರು ಪ್ರವಾಹ ಪರಿಹಾರ ಸಭೆಯಲ್ಲಿ ನಿದ್ದೆ ಮಾಡ್ತಿದ್ದಾರೆ. ಮತ್ತೊಬ್ಬ ಸಂಸದರು ಬೆಣ್ಣೆದೋಸೆ ತಿನ್ನುತ್ತಿದ್ದಾರೆ. ಇನ್ನುಳಿದ ಸಚಿವರುಗಳು ನಾಪತ್ತೆಯಾಗಿದ್ದಾರೆ. ಇದನ್ನೆಲ್ಲ ಮಾಡಲು ಕಾಂಗ್ರೆಸ್ ಹೇಳಿತ್ತಾ? ಎಂದು ಸರಣಿ ಟ್ವೀಟ್ ಮಾಡಿದೆ ಕಾಂಗ್ರೆಸ್.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!