ಭಾರತ ಸಂವಿಧಾನ ನಮ್ಮ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ : ಟಿ.ಪಿ.ಉಮೇಶ್

ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 26  : ಭಾರತ ದೇಶದ ಸಂವಿಧಾನ ಪ್ರಪಂಚದಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ. ಸಂವಿಧಾನ ಭಾರತದಂತ ಬೃಹತ್ ವಿಸ್ತಾರವುಳ್ಳ ಹತ್ತಾರು ಧರ್ಮ, ಸಾವಿರಾರು ಜಾತಿ, ಭಾಷೆ, ಸಂಸ್ಕೃತಿ ಆಚರಣೆಗಳುಳ್ಳ ಜನರನ್ನು ಒಗ್ಗೂಡಿಸಿಕೊಂಡು ದೇಶದ ಸರ್ವಾಂಗೀಣ ಪ್ರಗತಿ ಸಾಧಿಸಲು ಕಾರಣವಾಗಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಹಶಿಕ್ಷಕ ಹೊಳಲ್ಕೆರೆ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಟಿ.ಪಿ.ಉಮೇಶ್ ಹೇಳಿದರು.

ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಸಮೀಪದ ಅಮೃತಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಭಾಗವಾಗಿ ನನ್ನ ಸಂವಿಧಾನ ನನ್ನ ಸ್ವಾಭಿಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1947 ರ ಆಗಸ್ಟ್ 15 ರಂದು ಬ್ರಿಟೀಷರಿಂದ ಭಾರತ ದೇಶ ಸ್ವಾತಂತ್ರ್ಯ ಪಡೆದುಕೊಂಡಿತು. ನಂತರ ದೇಶವನ್ನು ಮುನ್ನಡೆಸುವ ಸಲುವಾಗಿ ಪ್ರಜಾಪ್ರಭುತ್ವ ಸರ್ಕಾರವನ್ನು ಒಪ್ಪಿಕೊಳ್ಳಲಾಯಿತು. ದೇಶದ ಹಾಗು ಪ್ರಾಂತೀಯ ಪ್ರಜಾ ಸರ್ಕಾರಗಳ ರಚನೆ, ಶಾಸಕಾಂಗ ಹಾಗು ಸಂಸತ್ತಿನ ಕಾರ್ಯಗಳು, ಕಾರ್ಯಾಂಗದ ಚಟುವಟಿಕೆಗಳು, ನ್ಯಾಯಪಾಲನೆ ರೀತಿನೀತಿಗಳ ವಿಸ್ತೃತವಾದ ವಿವರಣೆಯುಳ್ಳ ಸರ್ವಕಾಲಕ್ಕು ಹೊಂದಿಕೊಳ್ಳುವ ದೇಶದ ಕಾನೂನಾದ ಸಂವಿಧಾನ ರಚಿಸಲು ಸ್ವತಂತ್ರ ಭಾರತದ ಸಂವಿಧಾನ ರಚನಾ ಸಮಿತಿ ರಚಿಸಲಾಯಿತು. ಡಾ.ಬಾಬು ರಾಜೇಂದ್ರ ಪ್ರಸಾದರು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾದರೆ ಡಾ.ಬಿ.ಆರ್.ಅಂಬೇಡ್ಕರ್‌ ಕರಡು ಸಮಿತಿ ಅಧ್ಯಕ್ಷರಾದರು.

ಎರಡು ವರ್ಷ ಹನ್ನೊಂದು ತಿಂಗಳು ಹದಿನೇಳು ದಿನಗಳ ಕಾಲ ಬಹುಮುಖ ಆಯಾಮದಲ್ಲಿ ಅಧ್ಯಯನದಿಂದ ಸಂವಿಧಾನ ಕರಡು ರಚಿತವಾಯಿತು. ಭಾರತದ ಜನರಿಗೆ ಸಂಸತ್ತಿನ ಜನಪ್ರತಿನಿಧಿಗಳ ಚರ್ಚೆ ಮತ್ತು ಸರ್ವಸಮ್ಮತ ಒಪ್ಪಿಗೆಯ ಮೇರೆಗೆ 1949 ರ ನವೆಂಬರ್ 26 ರಂದು ಅರ್ಪಿಸಿಕೊಳ್ಳಲಾಯಿತು. ಭಾರತ ದೇಶದ ಭೂಭಾಗದಲ್ಲಿ ಸಂವಿಧಾನವನ್ನು 1950 ರ ಜನವರಿ 26 ರಿಂದ ಜಾರಿಗೆ ತರಲಾಯಿತು. ಇಂದಿಗೆ ಸಂವಿಧಾನ ರಚಿತಗೊಂಡು ಎಪ್ಪತ್ತೈದು ವರ್ಷಗಳಾದವು. ಭಾರತ ಸರ್ಕಾರವು 2015 ರಲ್ಲಿ ಭಾರತ ರತ್ನ ಅಂಬೇಡ್ಕರರ 125 ನೇ ಜನ್ಮ ದಿನವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸುವ ಮೂಲಕ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವಾಗಿ ಆಚರಿಸಲು ಸಂಕಲ್ಪ ಮಾಡಿತು. ಭಾರತ ದೇಶವಾಸಿಗಳ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಔದ್ಯೋಗಿಕ ಸಮಾನತೆ ಸ್ವಾತಂತ್ರ್ಯ ಹಕ್ಕುಗಳ ರಕ್ಷಿಸಿ ಎಲ್ಲರು ಭ್ರಾತೃತ್ವ ಸಹೋದರ ಭಾವನೆಯಿಂದ ಬಾಳುವಂತೆ ಅನುವುಮಾಡಿಕೊಟ್ಟಿರುವ ದೇಶದ ಪ್ರಬಲ ಕಾನೂನೆ ನಮ್ಮ ಸಂವಿಧಾನ. ಸಂವಿಧಾನ ನಮ್ಮ ಸ್ವಾಭಿಮಾನದ ಸಂಕೇತ. ಸಾರ್ವಭೌಮ ರಾಷ್ಟ್ರದ ಹೆಗ್ಗುರುತು ಎಂದು ತಿಳಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಭಾಗವನ್ನು ಸಾಮೂಹಿಕವಾಗಿ ಓದಿ ಹೇಳಲಾಯಿತು. ವಿದ್ಯಾರ್ಥಿಗಳಾದ ಕು.ಆರ್.ದೀಕ್ಷಾ, ಎನ್.ಲಕ್ಷ್ಮಿದೇವಿ, ಸಿ.ದೀಕ್ಷಾ, ತರುಣ, ಕೆ.ಉಷ ಸಂವಿಧಾನದ ಪೀಠಿಕೆ ಹಾಗು ಹಕ್ಕು ಕರ್ತವ್ಯಗಳ ಕುರಿತು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಡಿ.ಸಿದ್ಧಪ್ಪ, ರೇಷ್ಮಾ ಜಿ.ಎನ್. ಅಡಿಗೆ ಸಹಾಯಕರಾದ ತಿಮ್ಮಮ್ಮ, ಶಾರದಮ್ಮ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

suddionenews

Recent Posts

ಭಾರತ – ಪಾಕ್ ಪಂದ್ಯಕ್ಕೆ ಕ್ಷಣಗಣನೆ : ಗೆದ್ದು ಬಾ ಇಂಡಿಯಾ : ಗೆಲುವಿಗಾಗಿ ವಿಶೇಷ ಪೂಜೆ…!

ಇಂದು ಭಾರತ ವರ್ಸಸ್ ಪಾಕ್ ಪಂದ್ಯ ನಡೆಯಲಿದೆ. ಸಾಂಪ್ರಾದಾಯಿಕ ವೈರಿಗಳನ್ನು ಕಟ್ಟಿ ಹಾಕಲು ಭಾರತ ತಂಡ ಸಜ್ಜಾಗಿದೆ. ಈ ಪಂದ್ಯವನ್ನ…

13 minutes ago

IND vs PAK: ಕೆಲಹೊತ್ತಿನಲ್ಲಿ ಭಾರತ-ಪಾಕ್ ಪಂದ್ಯ : ದುಬೈನಲ್ಲಿ ಹವಾಮಾನ ಹೇಗಿದೆ ? ಪಿಚ್ ವರದಿಯ ಸಂಪೂರ್ಣ ಮಾಹಿತಿ ಇಲ್ಲಿದೆ…!

ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…

3 hours ago

ಒಂದು ಕಪ್ ಬ್ಲಾಕ್ ಕಾಫಿಯಿಂದ ಹಲವು ಆರೋಗ್ಯ ಪ್ರಯೋಜನಗಳು..!

  ಸುದ್ದಿಒನ್ ಬ್ಲಾಕ್ ಕಾಫಿ ಹೃದಯದ ಆರೋಗ್ಯವನ್ನು ರಕ್ಷಿಸುವುದಲ್ಲದೆ, ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.…

4 hours ago

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ, ಈ ರಾಶಿಗಳ ಮದುವೆಗೆ ತುಂಬಾ ಅಡಚಣೆ, ಭಾನುವಾರ ರಾಶಿ ಭವಿಷ್ಯ 23 ಫೆಬ್ರವರಿ…

7 hours ago

ಚಿತ್ರದುರ್ಗ : ನಾಲ್ವರು ಶ್ರೀಗಂಧದ ಕಳ್ಳರ ಬಂಧನ : 7.78 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ

    ಸುದ್ದಿಒನ್, ಹಿರಿಯೂರು, ಫೆಬ್ರವರಿ. 22 : ಅಬ್ಬಿನಹೊಳೆ ಮತ್ತು ಹೊಸದುರ್ಗ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಗಂಧ…

15 hours ago