Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸುಸಜ್ಜಿತ ಕನ್ನಡ ಭವನ ನಿರ್ಮಾಣ : ಶಾಸಕ ಟಿ.ರಘುಮೂರ್ತಿ ಭರವಸೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್,  ಚಳ್ಳಕೆರೆ, ಜುಲೈ. 08  : ಸಾಹಿತ್ಯ- ಸಾಂಸ್ಕೃತಿಕ ಚಟವಟಿಕೆಗಳಿಗೆ ಅನುಕೂಲವಾಗುವಂತೆ ನಗರದ ಮಧ್ಯ ಭಾಗದಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಿಸಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು.

ನಗರದ ಗಾಯಿತ್ರಿ ಕಲ್ಯಾಣಮಂಟಪದಲ್ಲಿ ಭಾನುವಾರ ಸಂಜೆ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಪತಿಷತ್ ಹಮ್ಮಿಕೊಂಡಿದ್ದ ಸಾಹಿತಿ ದಿವಂಗತ ಕಮಲಾ ಹಂಪನಾ ಸ್ಮರಣಾರ್ಥ ಕವಿಗೋಷ್ಠಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾಷೆ, ಸಂಸ್ಕೃತಿ ಹಾಗೂ ಜನಪದ ಕಲೆಗಳ ಜತೆಗೆ ಸಾಹಿತಿ ದಿವಂಗತ ಕಮಲ ಹಂಪನಾ ಅವರ ಬದುಕು-ಬರಹವನ್ನು ಯುವಜನರಿಗೆ ಅರ್ಥೈಸಿಕೊಡಬೇಕು. ಮತ್ತು ಶಿಕ್ಷಣದ ಜತೆಗೆ ಕನ್ನಡ ಸಾಹಿತ್ಯ ಓದುವ ಅಭಿರುಚಿ ತಪ್ಪದೆ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಬಂಡಾಯ ಸಾಹಿತಿ ಸಿ.ಶಿವಲಿಂಗಪ್ಪ, ಸಮಾಜದ ಆಗು ಹೋಗುಗಳಿಗೆ ಮಿಡಿಯುವುದಲ್ಲದೆ ತನ್ನ ಬದುಕಿನ ಬದ್ಧತೆಯನ್ನು ಕಾವ್ಯ ರೂಪದಲ್ಲಿ ಕಟ್ಟಿಕೊಡಬೇಕು ಎಂದು ಯುವಕವಿಗಳಿಗೆ ಕಿವಿ ಮಾತು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ, ಕನ್ನಡ ಭವನ ನಿರ್ಮಿಸಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ವಿ.ಶ್ರೀರಾಮರೆಡ್ಡಿ, ಪ್ರಾಧ್ಯಾಪಕ ಪ್ರೊ.ಜಿ.ವಿ.ರಾಜಣ್ಣ, ಸಹ ಶಿಕ್ಷಕರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಡಿ.ಈರಣ್ಣ, ಕಸಾಪ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಸಹ್ಯಾದ್ರಿ ಮಂಜುನಾಥ್, ಕೆ.ಚಿತ್ತಯ್ಯ ಮಾತನಾಡಿದರು.

ಕವಿಗೋಷ್ಠಿಯಲ್ಲಿ ಆಯ್ಕೆಯಾದ ರಂಗಸ್ವಾಮಿ ರಚಿಸಿದ ಕವನಕ್ಕೆ ಪ್ರಥಮ, ಎನ್.ಅಭಿಷೇಕ ದ್ವಿತೀಯ ಹಾಗೂ ರವಿಕುಮಾರ್ ರವರ ಕಾವ್ಯಕ್ಕೆ ತೃತೀಯ ಬಹುಮಾನ ನೀಡಿ ಗೌರವಿಸಲಾಯಿತು.ಒಟ್ಟು 20 ಜನ ಕವಿಗಳು ಕವಿತೆ ವಾಚನ ಮಾಡಿದರು.

ಕಸಾಪ ಕಸಬಾ ಹೋಬಳಿ ಕಸಾಪ ಘಟಕದ ಅಧ್ಯಕ್ಷ ದಯಾನಂದ್, ಪ್ರಧಾನ ಕರ‍್ಯದರ್ಶಿ ಸಿದ್ದಾಪುರ ಮಲ್ಲೇಶ್, ಪ್ರೌಢಶಾಲೆ ಕನ್ನಡ ಭಾಷಾ ಬೋಧಕರ ವೇದಿಕೆ ತಾಲ್ಲೂಕು ಅಧ್ಯಕ್ಷ ಮಹಾಂತೇಶ್, ಶಿಕ್ಷಕರ ಸಂಘದ ದೊಡ್ಡಯ್ಯ, ರವಿಕುಮಾರ್, ದೈಹಿಕ ಶಿಕ್ಷಕ ಮರವಾಯಿ ಶ್ರೀನಿವಾಸ್ ಇದ್ದರು.

ಚಳ್ಳಕೆರೆ ನಗರದ ಗಾಯಿತ್ರಿ ಕಲ್ಯಾಣಮಂಟಪದಲ್ಲಿ ಭಾನುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಕವಿಗೋಷ್ಠಿ ಹಾಗೂ ಪ್ರತಿಭಾ ಪುರಸ್ಕಾರ ಕರ‍್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಶಾಸಕ ಟಿ.ರಘುಮೂರ್ತಿ ಅಭಿನಂದಿಸಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಹ್ಯಾದ್ರಿ ಮಂಜುನಾಥ್, ಡಿ.ಈರಣ್ಣ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...