Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ ಬಂತು ಮಳೆ..ನಿಲ್ಲದ ಹಸ್ತ ಮಳೆ

Facebook
Twitter
Telegram
WhatsApp

ಚಿತ್ರದುರ್ಗ : ಜಿಲ್ಲಾದ್ಯಂತ ಬುಧವಾರ ಸುರಿದ  ಹಸ್ತ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಮುಂಗಾರಿನ ಕೊನೆ ದಿವಸಗಳಲ್ಲಿ ಮಳೆ ಆರಂಭವಾಗಿ ಈರುಳ್ಳಿ, ಶೇಂಗಾ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿಸಿದೆ. ಬೆಳಗ್ಗೆಯಿಂದಲೇ ಆರಂಭವಾದ ಮಳೆ ರಾತ್ರಿವರೆಗೂ ಮುಂದುವರೆಯಿತು. ದಿನವಿಡೀ ಕೆಲ ನಿಮಿಷಗಳ ವಿರಾಮ ನೀಡಿ ನಿರಂತರವಾಗಿ ಸುರಿದ ಕಾರಣ ಜನರು ಮನೆ ಬಿಟ್ಟು ಹೊರ ಬರಲಿಲ್ಲ.

ಮಳೆಯ ಆರ್ಭಟ ಜೋರಾಗಿದ್ದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಮಸ್ಯೆ ಅನುಭವಿಸಿದರು. ನಗರದ ಜೆಸಿಆರ್, ಗುಮಾಸ್ತ ಕಾಲನಿ, ಹೊಳಲ್ಕೆರೆ ರಸ್ತೆ ಸೇರಿದಂತೆ ವಿವಿಧೆಡೆಯ ಮನೆಗಳಿಗೆ ನೀರು ನುಗ್ಗಿತು.

ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನ ಸವಾರರು ಮಳೆ ನಡುವೆ ಪರದಾಡಿದರು. ಆಟೋಗಳಿಗೆ ಎಂದಿಗಿಂತ ಡಿಮ್ಯಾಂಡ್ ಹೆಚ್ಚಾಗಿತ್ತು. ಮಳೆಯ ರಭಸಕ್ಕೆ ಎಲ್‌ಐಸಿ ಹೊಂಡ ತುಂಬಿ ಹರಿದಿದ್ದು, ಮುಖ್ಯ ರಸ್ತೆ ಜಲಾವೃತಗೊಂಡಿದೆ.

ತಾಲೂಕಿನ ಸುತ್ತಮುತ್ತಲಿನ ಭಾಗದಲ್ಲಿ ಸಹ ಉತ್ತಮ ಮಳೆಯಾಗಿದೆ. ಕಡ್ಲೆ ಬಿತ್ತನೆಗೆ ಭೂಮಿ ಹದ ಮಾಡಿಕೊಳ್ಳಲು ಹಾಗೂ ತೋಟಗಾರಿಕೆ ಬೆಳೆಗಳಿಗೆ ಈ ಮಳೆ ಸಹಕಾರಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!