Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಣಿ ವಿಲಾಸ ಜಲಾಶಯಕ್ಕೆ ಮುಂದುವರಿದ ಒಳಹರಿವು : ಸದ್ಯ ಸಂಗ್ರಹವಾಗಿರುವ ನೀರು ಎಷ್ಟು..?

---Advertisement---

ಹಿರಿಯೂರು : ರಾಜ್ಯದಲ್ಲಿ ಮಳೆ ಮುಂದುವರೆದಿದ್ದು ವಾಣಿ ವಿಲಾಸ ಜಲಾಶಯದ ಒಳಹರಿವು ಕೂಡ ಹೆಚ್ಚಳವಾಗಿದೆ. ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚು ಮಳೆಯಾದ ಹಿನ್ನೆಲೆಯಲ್ಲಿ ನೀರು ಹರಿದು ಬಂದಿದೆ. ಈ ಮೂಲಕ ಡ್ಯಾಂನಲ್ಲಿ 2668 ಕ್ಯೂಸೆಕ್ ಒಳಹರಿವು ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 116.30 ಅಡಿ ತಲುಪಿದೆ. ಇದು ಸುತ್ತಮುತ್ತಲ ರೈತರಿಗೆ ಸಂತಸ ತಂದಿದೆ.

 

2022ರಲ್ಲಿ ವಾಣಿವಿಲಾಸ ಜಲಾಶಯ ಎರಡನೇ ಬಾರಿಗೆ ಕೋಡಿ ಬಿದ್ದಿತ್ತು. ಸುಮಾರು ಒಂದು ತಿಂಗಳ ಕಾಲ ವೇದಾವತಿ ನದಿ ಹರಿದಿತ್ತು. ಇದರಿಂದ ತಾಲ್ಲೂಕಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಿತ್ತು. ಅದು 89 ವರ್ಷಗಳ ಬಳಿಕ ಭರ್ತಿಯಾಗಿದ್ದು ಸ್ಥಳೀಯರ ಮೊಗದಲ್ಲಿ ಸಂತಸ ತಂದಿತ್ತು. ಆದರೆ 2023ರಲ್ಲಿ ಡ್ಯಾಂಗೆ ಯಾವುದೇ ಹೇಳಿಕೊಳ್ಳುವಂತಹ ನೀರು ಹರಿದು ಬಂದಿರಲಿಲ್ಲ.

ಈ ವರ್ಷ ಉತ್ತಮ ಮಳೆಯಾಗುತ್ತಿದೆ. ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಇದೇ ರೀತಿ ಇನ್ನೂ ಒಂದೆರಡು ತಿಂಗಳಲ್ಲಿ ಹೆಚ್ಚು ಮಳೆ ಬಂದು ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬಂದರೆ ಜಲಾಶಯ ಈ ಬಾರಿಯೂ ಕೋಡಿ ಬೀಳುವ ಸಾಧ್ಯತೆ ಇದೆ. ಸುಮಾರು 14 ಅಡಿ ನೀರು ಜಲಾಶಯಕ್ಕೆ ಹರಿದು ಬಂದರೇ ಜಲಾಶಯ ಬಹುತೇಕ ಕೋಡಿ ಬೀಳುವುದು ನಿಶ್ಚಿತವಾಗಿದೆ.

1907ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಿರಿಯೂರು ಪ್ರದೇಶದ ಅಚ್ಚುಕಟ್ಟುದಾರರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ವೇದಾವತಿ ನದಿಗೆ ಅಡ್ಡಲಾಗಿ ಮಾರಿ ಕಣಿವೆ ಬಳಿ ವಿವಿ ಸಾಗರ ಜಲಾಶಯವನ್ನು ನಿರ್ಮಾಣ ಮಾಡಿದರು. ಈ ಜಲಾಶಯ ನಿರ್ಮಾಣವಾಗಿ ಸುಮಾರು 118 ವರ್ಷ ಕಳೆದಿದೆ. ಹಿರಿಯೂರು, ಚಿತ್ರದುರ್ಗ, ಚಳ್ಳೆಕೆರೆ ಸೇರಿದಂತೆ ಡಿಆರ್‌ಡಿಓಗೆ ಕುಡಿಯುವ ನೀರಿನ ಮೂಲವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...