Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅರ್ಜುನ್ ಗಾಗಿ ಮುಂದುವರೆದ ಶೋಧ : ನಮ್ಮಪ್ಪನ ಮೂಳೆಯನ್ನಾದರೂ ಕೊಡಿ ಎಂದ ಇನ್ನೊಬ್ಬ ಯುವತಿ..!

Facebook
Twitter
Telegram
WhatsApp

ಶಿರೂರು ಗುಡ್ಡ ಕುಸಿತದಿಂದಾಗಿ ಹಲವು ಸಾವು ನೋವುಗಳಾಗಿವೆ. ಇನ್ನು ನಾಪತ್ತೆಯಾದವರ ಹುಡುಕಾಟವೂ ನಡೆಯುತ್ತಲೇ ಇದೆ. ಅದರಲ್ಲೂ ಕೇರಳ ಮೂಲದ ಅರ್ಜುನ್ ಲಾರಿ ಸಮೇತ ನಾಪತ್ತೆಯಾಗಿದ್ದು ಹುಡುಕಾಡುತ್ತಿದ್ದಾರೆ. ಇದೀಗ ಅರ್ಜುನ್ ಹುಡುಕಾಟದ ಬೆನ್ನಲ್ಲೇ ಇನ್ನಿಬ್ಬರು ನಾಪತ್ರೆಯಾದವರ ಕುಟುಂಬಸ್ಥರು ಒತ್ತಡ ಹಾಕುತ್ತಿದ್ದಾರೆ. ನಮ್ಮವರ ಮೂಳೆಯನ್ನಾದರೂ ಹುಡುಕಿಕೊಡಿ ಎನ್ನುತ್ತಿದ್ದಾರೆ.

ಇದೇ ಗುಡ್ಡ ಕುಸಿತದಲ್ಲಿ ಜಗನ್ನಾಥ್ ಹಾಗೂ ಲೋಕೇಶ್ ಎಂಬುವವರು ಕೂಡ ನಾಪತ್ತೆಯಾಗಿದ್ದರು. ಜುಲೈ 16ರಂದು ನಡೆದ ಗುಡ್ಡ ಕುಸಿತದಲ್ಲಿ ಜಗನ್ನಾಥ್ ಎಂಬುವವರು ಕಾಣೆಯಾಗಿದ್ದು, ಇಲ್ಲಿಯವರೆಗೂ ಅವರ ಸುಳಿವು ಕೂಡ ಸಿಕ್ಕಿಲ್ಲ. ಇದೋಗ ಅವರ ಮಗಳು ಪಲ್ಲವಿ ತಂದೆಯನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

ತಂದೆ ಸಿಗದ ಬಗ್ಗೆ ಕಣ್ಣೀರಾಕಿರುವ ಪಲ್ಲವಿ, ನಮ್ಮ ತಂದೆ ಕಾಣೆಯಾಗಿ 12 ದಿನ ಆಯ್ತು. ಏನು ಸುದ್ದಿ ಇಲ್ಲ. ಅವರನ್ನು ಹುಡುಕಿಕೊಡಿ. ಅವರನ್ನು ನಾವೂ ನೋಡಬೇಕು. ಕಾರ್ಯಾಚರಣೆ ಬಗ್ಗೆ ಏನು ಗೊತ್ತಾಗುತ್ತಿಲ್ಲ. ಬರೀ ಅರ್ಜುನ್, ಲಾರಿ ಅಂತಷ್ಟೇ ಹೇಳುತ್ತಿದ್ದಾರೆ. ನಮ್ಮ ಅಪ್ಪನ ಬಗ್ಗೆ ಏನು ಮಾತನಾಡುತ್ತಿಲ್ಲ. ಸರ್ಕಾರದವರು, ಜನಪ್ರತಿನಿಧಿಗಳು ಹುಡುಕಿಕೊಡುತ್ತೇವೆ ಎನ್ನುತ್ತಿದ್ದಾರೆ. ಅಮ್ಮ ಸರಿಯಾಗಿ ಊಟ ಮಾಡುತ್ತಿಲ್ಲ. ಮಾವ, ಅತ್ತೆ ಅವರ ನೆನಪಿನಲ್ಲಿಯೇ ಇದ್ದಾರೆ. ಅವರ ಮೂಳೆ ಸಿಕ್ಕ ಲರು ಸಾಕು ಹುಡುಕಿಕೊಡಿ ಎಂದು ಪಲ್ಲವಿ ಮನವಿ ಮಾಡಿದ್ದಾರೆ.

ಲೋಕೇಶ್ ಎಂಬಾತ ಕೂಡ ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದಾನೆ. ಚಾಲಕನ ಜೆಲಸ ಮಾಡುತ್ತಿದ್ದ ಲೋಕೇಶ್ ಗುಡ್ಡ ಕುಸಿತಕ್ಕೂ ಮೊದಲು ಹೊಟೇಲ್ ಒಂದರಲ್ಲಿ ಕಾಣಿಸಿದ್ದ ಎನ್ನಲಾಗಿದೆ. ಹೀಗಾಗಿ ಲೋಕೇಶ್ ಅವರಿಗೂ ಹುಡುಕಾಟ ನಡೆಯಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ ವೈದ್ಯರಾದ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!