ನಿರಂತರ ಮಳೆ : ಡಂಗೂರ ಸಾರಲು ಜಿಲ್ಲಾಧಿಕಾರಿ ಆದೇಶ

0 Min Read

ಚಿತ್ರದುರ್ಗ, (ನ.19) :  ಜಿಲ್ಲೆಯಲ್ಲಿ ಬೀಳುತ್ತಿರುವ ಮಳೆಯಿಂದ ಕೆಲವು ಭಾಗಗಳಲ್ಲಿ ಮನೆ ಕುಸಿದು ಪ್ರಾಣಹಾನಿ ಪ್ರಕರಣಗಳು ಸಂಭವಿಸುತ್ತಿರುವುದರಿಂದ ತಾಲ್ಲೂಕು ವ್ಯಾಪ್ತಿಗಳಲ್ಲಿ ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಶಿಥಿಲವಾಗಿರುವ ಮನೆಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ಕೂಡಲೇ ತೆರೆಯುವುದು, ಪರಿಸ್ಥಿತಿಯನ್ನು ಕಾಲಕಾಲಕ್ಕೆ ಅವಲೋಕಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *