Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗುತ್ತಿಗೆದಾರರ ಸಂಘದ ಆರೋಪ : ಸಚಿವಸಂಪುಟದಲ್ಲಿ ಏನೆಲ್ಲಾ ಚರ್ಚೆಯಾಯ್ತು ? 

---Advertisement---

 

 

ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಎರಡು ತಿಂಗಳೊಳಗಾಗಿ ತನ್ನ ವರದಿಯನ್ನು ನೀಡಲು ಸೂಚಿಸುವುದಾಗಿ ಕಾನೂನು ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.

ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಟಿ ನಡೆಸಿ ಸಚಿವ ಸಂಪುಟ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ತನ್ನ ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ವಿಚಾರಣಾ ಆಯೋಗ ದೂರುಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. 3 ಲಕ್ಷ ಕಾಮಗಾರಿಗಳಲ್ಲಿ ಪೈಕಿ ಆಯೋಗವು 1729 ಕಾಮಗಾರಿಗಳ ಬಗ್ಗೆ ವಿಸ್ತೃತವಾಗಿ ಪರಿಶೀಲನೆ ನಡೆಸಲಾಗಿದೆ. ಕೆಲವುಗಳಲ್ಲಿ ಕಾಮಗಾರಿಗಳಲ್ಲಿ ಅನುದಾನಕ್ಕಿಂತ ಹೆಚ್ಚು ಕಾಮಗಾರಿಯನ್ನು ನೀಡಲಾಗಿದೆ. ಕೆಲವುಗಳಲ್ಲಿ ಅಲ್ಪ ಅನುದಾನ ಬಿಡುಗಡೆಯಾಗಿದ್ದರೂ, ಅದಕ್ಕೂ ಮೀರಿದ ಪಾವತಿಯಾಗಿದೆ. ಕೆಲವುಗಳಲ್ಲಿ ಕಾಮಗಾರಿ ನಿರ್ವಹಿಸಿರುವುದರ ಬಗ್ಗೆ ಸಂಶಯವಿದೆ. ಕೆಲವುಗಳಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಬೇರೆಯವರಿಂದ ಹಸ್ತಕ್ಷೇಪವಾಗಿರುವುದನ್ನು ಆಯೋಗವು ಮಾಹಿತಿ ತಿಳಿಸಿದೆ. ಸಚಿವ ಸಂಪುಟ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ವಿಚಾರಣಾ ಆಯೋಗದ ವರದಿಯ ಮೇಲೆ ಎಸ್ ಐ ಟಿಯನ್ನು ರಚಿಸಲು ನಿರ್ಧರಿಸಲಾಗಿದ್ದು, ಇದರಲ್ಲಿ ಅಗತ್ಯವಿರುವ ಪರಿಣಿತರನ್ನು ನಿಯೋಜಿಸಿ, ಎರಡು ತಿಂಗಳಲ್ಲಿ ವರದಿಯನ್ನು ಸಲ್ಲಿಸಲು ಎಸ್ ಐ ಟಿಗೆ ಸೂಚನೆ ನೀಡಲು ಸಚಿವಸಂಪುಟ ತೀರ್ಮಾನ ಕೈಗೊಂಡಿದ್ದು ಹಾಗೂ ಸಂಬಂಧಪಟ್ಟ ಇಲಾಖೆಯಿಂದ ಅಪೂರ್ಣ ಮಾಹಿತಿಗಳಿರುವ ಬಗ್ಗೆ ವಿಚಾರಣಾ ಆಯೋಗ ತಿಳಿಸಿರುವುದರಿಂದ, ಸಂಬಂಧಪಟ್ಟ ಇಲಾಖೆಯವರೂ ಎಸ್ ಐ ಟಿ ಯವರು ಈ ಬಗ್ಗೆ ಕೇಳುವ ಮಾಹಿತಿಗಳನ್ನು ಒದಗಿಸಲು ಸೂಚನೆಯನ್ನು ನೀಡಲಾಗಿದೆ ಎಂದರು.

40% ಕಮೀಷನ್‌ನ ವಿಚಾರ ವರದಿಯಲ್ಲಿ ಉಲ್ಲೇಖಿಸಲಾಗಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ಲಂಚ ವ್ಯವಹಾರ ನಡೆದಿರುವ ಬಗ್ಗೆ ಆಯೋಗದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ದೂರು ಬಂದಿರುವ ಇಲಾಖೆಗಳ ಕಾಮಗಾರಿಗಳ ಬಗ್ಗೆ ಆಯೋಗವು ಪರಿಶೀಲನೆ ನಡೆಸಿದೆ. ಆಯೋಗವು ಗುತ್ತಿಗೆದಾರ ದೂರುಗಳನ್ನು ಪರಿಗಣಿಸಿ, ವಿಚಾರಣೆ ನಡೆಸಿದೆ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment