Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಲ್ಯ ವಿವಾಹ ಸಾಮಾಜಿಕ ಪಿಡುಗು ನಿಲ್ಲಿಸಲು ಸಹಕರಿಸಿ : ಶಿಕ್ಷಣ ಮೊದಲು, ನಂತರ ಮದುವೆ : ಟಿಹೆಚ್‌ಇಒ ಮಂಜುನಾಥ್

---Advertisement---

 

 

ಚಿತ್ರದುರ್ಗ. ಸೆ.23: ಸಾಮಾಜಿಕ ಪಿಡುಗು ಬಾಲ್ಯ ವಿವಾಹ ನಿಲ್ಲಿಸಲು ಸಹಕರಿಸಿ. ಶಿಕ್ಷಣ ಮೊದಲು ನಂತರ ಮದುವೆ ಮಾಡುವಂತೆ ಸಮುದಾಯ ಜಾಗೃತಗೊಳಿಸಿ ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಗ್ರಾಮ ಆರೋಗ್ಯ ಯೋಜನೆ ಚುನಾಯಿತ ಪ್ರತನಿಧಿಗಳಿಗೆ ಸಮನ್ವಯ ಇಲಾಖೆಗಳ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಪಂಚಾಯತಿ ಕ್ಷಿಪ್ರ ನಿಗಾವಣಾ ತಂಡಗಳ ರಚನೆ ಸಾರ್ವಜನಿಕ ಆರೋಗ್ಯ ಸೇವೆ ಒದಗಿಸಲು ಒಗ್ಗೂಡಿಸಬೇಕಾಗಿದೆ. ತರಬೇತಿಯನ್ನು ನೀಡಿ ಕಾರ್ಯಕ್ಷಮತೆಯನ್ನು ಬಲಪಡಿಸಲು ಈ ತರಬೇತಿ ಅವಶ್ಯವಾಗಿದೆ. ತರಬೇತಿ ನಂತರ ಗ್ರಾಮ ಪಂಚಾಯತಿ ಟಾಸ್ಕ್ ಫೋರ್ಸ್ ಸಮಿತಿ ಬಲಗೊಂಡು ಸದಸ್ಯರು ತಮ್ಮ ತಮ್ಮ ವಾರ್ಡ್ಗಳಲ್ಲಿ ಸಾರ್ವಜನಿಕ ಆರೋಗ್ಯ ಸಮಸ್ಯೆ ಬಗೆಹರಿಸಲು ಸಕ್ರಿಯವಾಗಬೇಕು ಎಂದು ಹೇಳಿದರು.
ಐ.ಸಿ.ಡಿ.ಎಸ್ ಮೇಲ್ವಿಚಾರಕಿ ವಾಸವಿ ಮಾತನಾಡಿ ಬಾಲ್ಯವಿವಾಹ ತಡೆ ಕಾಯ್ದೆ ಬಾಲ್ಯ ವಿವಾಹದಿಂದ ಉಂಟಾಗುವ ತಾಯಿ ಮರಣ ಶಿಶು ಮರಣದ ಬಗ್ಗೆ ಮಾಹಿತಿ ನೀಡಿದರು.

ಐ.ಸಿ.ಡಿ.ಎಸ್. ಮೇಲ್ವಿಚಾರಕಿ ರೂಪ ಮಾತನಾಡಿ, ಮಕ್ಕಳ ಹಕ್ಕು, ಸಹಾಯ ವಾಣಿ ಅಪೌಷ್ಟಿಕತೆ ಬಗ್ಗೆ ತಿಳಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ರೋಗಗಳು, ಕೀಟಜನ್ಯ ರೋಗಗಳ ನಿಯಂತ್ರಣ ನಿರ್ವಾಹಣಾ ಕ್ರಮದ ಬಗ್ಗೆ ತರಬೇತಿ ನೀಡಿದರು.

ತರಬೇತಿ ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಮ್ಮ ಹುಣಸೆಕಟ್ಟೆ, ನಾರಾಯಣಸ್ವಾಮಿ, ಮಂಜಣ್ಣ, ಪವಿತ್ರಾ ಮಹಾಸ್ವಾಮಿ, ಪಂಚಾಯತಿ ಕಾರ್ಯದರ್ಶಿ ಪ್ರಶಾಂತ ಸಮುದಾಯ ಆರೋಗ್ಯಾಧಿಕಾರಿ ಭಾರತಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ನವೀನಲಕ್ಷಿö್ಮÃ, ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ನಾಗೇಶ್ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment