Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿರಿಧಾನ್ಯ ಬಳಸಿ ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿಟ್ಟುಕೊಳ್ಳಿ : ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.15) : ಸಿರಿಧಾನ್ಯ, ಸೊಪ್ಪು, ತರಕಾರಿಗಳನ್ನು ಬಳಸಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ತಿಳಿಸಿದರು.

ನೆಹರು ಯುವ ಕೇಂದ್ರ, ಪ್ರಜಾಸೇವಾ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯ ಸಿರಿ ಮಿಲೆಟ್, ರೋಟರಿ ಕ್ಲಬ್, ಚಿನ್ಮೂಲಾದ್ರಿ ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ರೋಟರಿ ಬಾಲಭವನದಲ್ಲಿ ಶುಕ್ರವಾರ ನಡೆದ ಸಿರಿಧಾನ್ಯಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಮೂತ್ರ ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರಬೇಕು. ಅಲ್ಪಪ್ರಮಾಣದಲ್ಲಿ ಮೇಲಿಂದ ಮೇಲೆ ಊಟ ಮಾಡುತ್ತಿರಬೇಕು. ಸಕ್ಕರೆ ಕಾಯಿಲೆಯಿರುವವರು ಇಂತಹದ್ದೇ ಆಹಾರ ಸೇವಿಸಬೇಕೆಂದೇನು ಇಲ್ಲ. ಎಲ್ಲಾ ಆಹಾರವನ್ನು ಮಿತಿಯಾಗಿ ಬಳಸಬೇಕು. ರಾಗಿ, ಜೋಳ, ಸಜ್ಜೆ, ನವಣೆ, ಗೋಧಿ, ಬರಗು, ಸಾಮೆ, ಊದಲು, ಕೊರಲೆ, ಸೊಪ್ಪು, ತರಕಾರಿ, ನಾರಿನಾಂಶವುಳ್ಳ ಪದಾರ್ಥಗಳನ್ನು ಸೇವಿಸುವುದು ಒಳ್ಳಯದು ಎಂದು ಹೇಳಿದರು.

ರಾತ್ರಿ ಬೇಗ ಮಲಗಿ, ಬೆಳಿಗ್ಗೆ ಬೇಗ ಏಳುವ ಅಭ್ಯಾಸ ರೂಢಿಸಿಕೊಳ್ಳಬೇಕು. ದಿನಂಪೂರ್ತಿ ಲವಲವಿಕೆಯಿಂದ ಇರಬೇಕು. ಶುಗರ್ ಇದೆ ಎಂದು ಮಾನಸಿಕವಾಗಿ ಕುಗ್ಗಬಾರದು.

ಯೋಗ, ಧ್ಯಾನ, ಪ್ರಾಣಾಯಾಮ, ವಾಕ್ ಮಾಡುವುದು ಒಳಿತು. ನಿಯಮಿತ ಔಷಧಿ ಸೇವನೆ ಒಂದೆ ತರಹದ ಆಹಾರ ಪದ್ದತಿಯಿಂದ ಆರೋಗ್ಯಕ್ಕೆ ಹಾನಿಯಾಗಬಹುದು. ಸರಳ, ಸಂತೃಪ್ತ ಜೀವನವಿದ್ದಷ್ಟು ರೋಗದಿಂದ ದೂರವಿರಬಹುದು. ಕಿರುಧಾನ್ಯಗಳನ್ನು ಬಳಸುವುದರಿಂದ ದೇಹದಲ್ಲಿ ಕೊಬ್ಬಿನಾಂಶ
ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್ ಮಾತನಾಡಿ ಹಿಂದಿನ ಕಾಲದಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬಳಸುತ್ತಿದ್ದರಿಂದ ಆಯಸ್ಸು ಜಾಸ್ತಿಯಿರುತ್ತಿತ್ತು. ಇಂದಿನ ಯುವ ಪೀಳಿಗೆಗೆ ಸಿರಿಧಾನ್ಯಗಳ ಸೇವನೆಯಿಂದಾಗುವ ಪ್ರಯೋಜನವನ್ನು ತಿಳಿಸಬೇಕಿದೆ ಎಂದು ಹೇಳಿದರು.

ಸಿರಿ ಮಿಲ್ಲೆಟ್ ಸಂಯೋಜನಾಧಿಕಾರಿ ಅಭಿಷೇಕ್ ಸಿರಿಧಾನ್ಯಗಳ ಪ್ರಾತ್ಯಕ್ಷಿಕೆ ಮತ್ತು ಅವುಗಳಿಂದ ತಯಾರಿಸಬಹುದಾದ ಆಹಾರ ಪದಾರ್ಥಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ರೋಟರಿ ಕ್ಲಬ್ ಅಧ್ಯಕ್ಷರಾದ ಕನಕರಾಜು, ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷ ಎಂ.ಬಿ.ಶಂಕರಪ್ಪ, ಕಾರ್ಯದರ್ಶಿ ಎಸ್.ಲಕ್ಷ್ಮಿಕಾಂತ್, ಗಾಯತ್ರಿ ಶಿವರಾಂ, ಅನುಸೂಯಮ್ಮ, ಓಂಕಾರಮ್ಮ, ಶ್ರೀನಿವಾಸ್, ಅರುಣ್‍ಕುಮಾರ್, ಎಸ್.ವಿ.ಗುರುಮೂರ್ತಿ ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

error: Content is protected !!