ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 21ರಂದು 224 ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು ಎಂದು ಸಚಿವ ಈಶ್ವರಪ್ಪ ಹೇಳಿದರು.
ಈ ವೇಳೆ ಮಾತನಾಡಿದ ಅವರು, ಹಿಂದುಳಿದ ಸಮಾಜಗಳ ಮಾಜಿ ಸಂಸದರು, ಮಾಜಿ ಶಾಸಕರು, ಮಾಜಿ ಸಚಿವರು, ವಿಧಾನಪರಿಷತ್ ಮಾಜಿ ಸದಸ್ಯರು ಇದರಲ್ಲಿ ಭಾಗವಹಿಸಲಿದ್ದಾರೆ . ಇಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ವತಿಯಿಂದ ಬೆಂಗಳೂರಿನ ವಸಂತ್ ನಗರದ ಅಂಬೇಡ್ಕರ್ ಭವನ ದಲ್ಲಿ ಇಂದು ನಡೆದ ಕಾರ್ಯಕರ್ತರ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಮ್ಮಿಕೊಳ್ಳಲಾಗಿದ್ದು, ಒಬಿಸಿ ಮೋರ್ಚಾ ಪದಾಧಿಕಾರಿಗಳು ಸೇರಿ ಸುಮಾರು 2ರಿಂದ 2,500 ಜನರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕೇಂ ದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಸೌಲಭ್ಯಗಳನ್ನು ನೀಡುತ್ತಿವೆ. ಅವುಗಳ ಬಗ್ಗೆ ತಿಳಿದುಕೊಂಡು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ತಿಳಿಸಿದರು. ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಗರಿಷ್ಠ ಸಂಖ್ಯೆಯ ಹಿಂದುಳಿದ ಸಮಾಜದವರು ಮತ್ತು ದಲಿತರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿ, ಇದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದ ಸಮರ್ಪಿಸಿದರು.
ಬಿಜೆಪಿ ಹಿಂದೆಯೂ ಹಿಂದುಳಿದ ಸಮಾಜಗಳ ಮಠಗಳಿಗೆ 100 ಕೋಟಿ ಅನುದಾನ ನೀಡಿದೆ ಎಂದು ವಿವರಿಸಿದರು. ಇದರಿಂದ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್, ಆಸ್ಪತ್ರೆ ಸೇರಿದಂತೆ ವಿವಿಧ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳೂ ನಡೆದಿವೆ ಎಂದರು. ಹಿಂದುಳಿದ ಸಮಾಜ, ಜನಪ್ರತಿನಿಧಿಗಳು ಮತ್ತು ಸರಕಾರದ ನಡುವಿನ ಕೊಂಡಿಯಾಗಿ ಮೋರ್ಚಾ ಕೆಲಸ ಮಾಡಬೇಕು ಎಂದು ಅವರು ಆಶಿಸಿದರು. ಕುಟುಂಬ, ಜಾತಿಯ ಅಭಿವೃದ್ಧಿಯಿಂದ ಹಿಂದುತ್ವದ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಜಾತಿಯ ಸಂಘಟನೆಗಳ ಸಮಾವೇಶದಲ್ಲಿ ಭಾಗವಹಿಸುವುದು ತಪ್ಪಲ್ಲ ಎಂದು ನುಡಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…