Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಕ್ಕರ್ ಬಾಂಬ್ ಸ್ಪೋಟ : ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ವಿಚಾರಣೆ..!

Facebook
Twitter
Telegram
WhatsApp

ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ಈ ಸಂಬಂಧ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಅವರನ್ನು ವಿಚಾರಣೆ ನಡೆಸಿದೆ. ಶಾರೀಖ್ ಅಜ್ಜನಿಗೆ ಸಂಬಂಧಿಸಿದ ಜಾಗದಲ್ಲಿ ಕಾಂಗ್ರೆಸ್ ಕಚೇರಿಯನ್ನು ತೆರೆಯಲಾಗಿದೆ. ಹೀಗಾಗಿ ಇಡಿ ಅಧಿಕಾರಿಗಳು ದಿಢೀರನೆ ಕಿಮ್ಮನೆ ರತ್ನಾಕರ್ ಅವರ ಕಚೇರಿಗೆ ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ.

ಈ ಕಚೇರಿಯನ್ನು ಆರಂಭಕ್ಕೂ ಮುನ್ನವೇ ಕಿಮ್ಮನೆ ರತ್ನಾಕರ್ ಅವರ ಸಂಬಂಧಿಕರ ಹೆಸರಿನಲ್ಲಿ ಅಗ್ರಿಮೆಂಟ್ ಮಾಡಲಾಗಿತ್ತಂತೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಇಡಿ ಅಧಿಕಾರಿಗಳು, ತನಿಖೆಗಾಗಿ ಕಿಮ್ಮನೆ ಅವರ ಕಚೇರಿಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ ಪ್ರತಿ ತಿಂಗಳು 10 ಸಾವಿರ ಬಾಡಿಗೆಯಂತೆ ನಿಗದಿ ಮಾಡಲಾಗಿತ್ತಂತೆ. ಅದರಂತೆ, ಶಾರಿಖ್ ಅವರ ಕುಟುಂಬದ ಅಕೌಂಟ್ ಗೆ ಹಾಕಲಾಗುತ್ತಿತ್ತಂತೆ.

ಇನ್ನು ಈ ಸಂಬಂಧ ಮುಂದಿನ ಜೂನ್ ತಿಂಗಳಲ್ಲಿ ಅಗ್ರಿಮೆಂಟ್ ಅಂತ್ಯವಾಗಲಿದೆಯಂತೆ. ಹೀಗಾಗಿಯೇ ಅಡ್ವಾನ್ಸ್ ವಾಪಾಸ್ ಮಾಡುವುದಕ್ಕೆ ಸೂಚನೆ ಕೂಡ ನೀಡಿದ್ದಾರಂತೆ. ಅಡ್ವಾನ್ಸ್ ವಾಪಾಸ್ ನೀಡಿದರೆ ಆಫೀಸ್ ಖಾಲಿ ಮಾಡುವುದಾಗಿ ಕಿಮ್ಮನೆ ರತ್ನಾಕರ್ ಹೇಳಿದ್ದಾರಂತೆ. ಈ ಬಗ್ಗೆ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಇನ್ನು ಶಾರೀಖ್ ನ ಹಣ ಮತ್ತು ಆಸ್ತಿ ಮೂಲವನ್ನು ತಿಳಿದುಕೊಳ್ಳಲು ಅಧಿಕಾರಿಗಳು ಶಿವಮೊಗ್ಗದ ತೀರ್ಥಹಳ್ಳಿಗೂ ಭೇಟಿ ನೀಡಲಿದ್ದಾರಂತೆ. ಇನ್ನು ಶಿವಮೊಗ್ಗದ ಸೊಪ್ಪುಗುಡ್ಡೆಯ ಮನೆಗೂ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!