Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಕಷ್ಟು ಬಂಡವಾಳ ಇಲ್ಲದ ಕಾರಣ ಬಾಗಲಕೋಟೆಯಲ್ಲಿ ಸಹಕಾರಿ ಬ್ಯಾಂಕ್ ಪರವಾನಗಿ ರದ್ದು..!

Facebook
Twitter
Telegram
WhatsApp

ರೆಪೋ ದರ ಏರಿಕೆ ಮಾಡಿ ಶಾಕ್ ಕೊಟ್ಟ ಬೆನ್ನಲ್ಲೇ ಇದೀಗ ಆರ್ಬಿಐ ಬಾಗಲಕೋಟೆಯ ಮುಧೋಳ ಸಹಕಾರಿ ಬ್ಯಾಂಕ್ ಲಿಮಿಟೆಡ್ ಪರವಾನಗಿಯನ್ನು ರದ್ದುಗೊಳಿಸಿದೆ. ಬ್ಯಾಂಕಿನ ಬಳಿ ಸಾಕಷ್ಟು ಬಂಡವಾಳ ಇಲ್ಲದ ಕಾರಣ ಈ ನಿರ್ಧಾರ ಕೈಗೊಂಡಿರೋದಾಗಿ ಆರ್ ಬಿಐ ತಿಳಿಸಿದೆ. ಠೇವಣಿಗಳ ಸ್ವೀಕೃತಿ ಹಾಗೂ ಮರುಪಾವತಿ ಸೇರಿದಂತೆ ಯಾವುದೇ ವ್ಯವಹಾರಗಳನ್ನು ನಡೆಸದಂತೆ ಬ್ಯಾಂಕಿಗೆ ಆರ್ ಬಿಐ ನಿರ್ಬಂಧ ವಿಧಿಸಿದೆ.

ಬ್ಯಾಂಕಿನ ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ಅದು ತನ್ನ ಠೇವಣಿದಾರರಿಗೆ ಪೂರ್ಣ ಪ್ರಮಾಣದಲ್ಲಿ ಹಣ ಪಾವತಿಸೋದು ಅಸಾಧ್ಯ. ಹೀಗಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಮುಂದುವರಿಸಲು ಬ್ಯಾಂಕಿಗೆ ಅವಕಾಶ ನೀಡಿದರೆ ಸಾರ್ವಜನಿಕರ ಹಿತಾಸಕ್ತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ’ ಎಂದು ಆರ್ ಬಿಐ ತಿಳಿಸಿದೆ.

ಮುಧೋಳ ಸಹಕಾರಿ ಬ್ಯಾಂಕ್ ಲಿಮಿಟೆಡ್ ಸಲ್ಲಿಸಿರುವ ಅಂಕಿಅಂಶಗಳ ಪ್ರಕಾರ ಶೇ.99ಕ್ಕಿಂತಲೂ ಅಧಿಕ ಠೇವಣಿದಾರರು ಡಿಐಸಿಜಿಸಿಯಿಂದ ಪೂರ್ಣ ಪ್ರಮಾಣದ ಠೇವಣಿ ಪಡೆಯಲು ಅರ್ಹರಾಗಿದ್ದಾರೆ ಎಂದು ಆರ್ ಬಿಐ ಹೇಳಿದೆ.

ಇನ್ನು ಕರ್ನಾಟಕದ ಸಹಕಾರ ಹಾಗೂ ಸಹಕಾರ ಸೊಸೈಟಿಗಳ ನೋಂದಣಾಧಿಕಾರಿಗೆ ಕೂಡ ಬ್ಯಾಂಕನ್ನು ಮುಚ್ಚಿ ಒಬ್ಬರು ಅಧಿಕಾರಿಯನ್ನು ನೇಮಕ ಮಾಡುವಂತೆ ಆರ್ ಬಿಐ ಆದೇಶಿಸಿದೆ.ಬ್ಯಾಂಕ್ ದಿವಾಳಿಯಾದ ಸಂದರ್ಭದಲ್ಲಿ ಠೇವಣಿದಾರರು ಡಿಐಸಿಜಿಸಿಯಿಂದ (DICGC) 5 ಲಕ್ಷ ರೂ.ವರೆಗೆ ಠೇವಣಿಯ ವಿಮೆ ಕ್ಲೈಮ್ ಮೊತ್ತ ಸ್ವೀಕರಿಸಲು ಅರ್ಹರಾಗಿದ್ದಾರೆ ಎಂದು ಆರ್ ಬಿಐ ತಿಳಿಸಿದೆ. ಬ್ಯಾಂಕಿನ ಠೇವಣಿದಾರರ ಮನವಿ ಮೇರೆಗೆ ಡಿಐಸಿಜಿಸಿ ಕಾಯ್ದೆ1961ರ ಸೆಕ್ಷನ್ 18ರಡಿಯಲ್ಲಿ 16.69 ಕೋಟಿ ರೂ. ಒಟ್ಟು ವಿಮಾ ಮೊತ್ತವನ್ನು ಪಾವತಿ ಮಾಡೋದಾಗಿ ಆರ್ ಬಿಐ (RBI) ಹೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!