Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಕಷ್ಟು ಬಂಡವಾಳ ಇಲ್ಲದ ಕಾರಣ ಬಾಗಲಕೋಟೆಯಲ್ಲಿ ಸಹಕಾರಿ ಬ್ಯಾಂಕ್ ಪರವಾನಗಿ ರದ್ದು..!

Facebook
Twitter
Telegram
WhatsApp

ರೆಪೋ ದರ ಏರಿಕೆ ಮಾಡಿ ಶಾಕ್ ಕೊಟ್ಟ ಬೆನ್ನಲ್ಲೇ ಇದೀಗ ಆರ್ಬಿಐ ಬಾಗಲಕೋಟೆಯ ಮುಧೋಳ ಸಹಕಾರಿ ಬ್ಯಾಂಕ್ ಲಿಮಿಟೆಡ್ ಪರವಾನಗಿಯನ್ನು ರದ್ದುಗೊಳಿಸಿದೆ. ಬ್ಯಾಂಕಿನ ಬಳಿ ಸಾಕಷ್ಟು ಬಂಡವಾಳ ಇಲ್ಲದ ಕಾರಣ ಈ ನಿರ್ಧಾರ ಕೈಗೊಂಡಿರೋದಾಗಿ ಆರ್ ಬಿಐ ತಿಳಿಸಿದೆ. ಠೇವಣಿಗಳ ಸ್ವೀಕೃತಿ ಹಾಗೂ ಮರುಪಾವತಿ ಸೇರಿದಂತೆ ಯಾವುದೇ ವ್ಯವಹಾರಗಳನ್ನು ನಡೆಸದಂತೆ ಬ್ಯಾಂಕಿಗೆ ಆರ್ ಬಿಐ ನಿರ್ಬಂಧ ವಿಧಿಸಿದೆ.

ಬ್ಯಾಂಕಿನ ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ಅದು ತನ್ನ ಠೇವಣಿದಾರರಿಗೆ ಪೂರ್ಣ ಪ್ರಮಾಣದಲ್ಲಿ ಹಣ ಪಾವತಿಸೋದು ಅಸಾಧ್ಯ. ಹೀಗಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಮುಂದುವರಿಸಲು ಬ್ಯಾಂಕಿಗೆ ಅವಕಾಶ ನೀಡಿದರೆ ಸಾರ್ವಜನಿಕರ ಹಿತಾಸಕ್ತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ’ ಎಂದು ಆರ್ ಬಿಐ ತಿಳಿಸಿದೆ.

ಮುಧೋಳ ಸಹಕಾರಿ ಬ್ಯಾಂಕ್ ಲಿಮಿಟೆಡ್ ಸಲ್ಲಿಸಿರುವ ಅಂಕಿಅಂಶಗಳ ಪ್ರಕಾರ ಶೇ.99ಕ್ಕಿಂತಲೂ ಅಧಿಕ ಠೇವಣಿದಾರರು ಡಿಐಸಿಜಿಸಿಯಿಂದ ಪೂರ್ಣ ಪ್ರಮಾಣದ ಠೇವಣಿ ಪಡೆಯಲು ಅರ್ಹರಾಗಿದ್ದಾರೆ ಎಂದು ಆರ್ ಬಿಐ ಹೇಳಿದೆ.

ಇನ್ನು ಕರ್ನಾಟಕದ ಸಹಕಾರ ಹಾಗೂ ಸಹಕಾರ ಸೊಸೈಟಿಗಳ ನೋಂದಣಾಧಿಕಾರಿಗೆ ಕೂಡ ಬ್ಯಾಂಕನ್ನು ಮುಚ್ಚಿ ಒಬ್ಬರು ಅಧಿಕಾರಿಯನ್ನು ನೇಮಕ ಮಾಡುವಂತೆ ಆರ್ ಬಿಐ ಆದೇಶಿಸಿದೆ.ಬ್ಯಾಂಕ್ ದಿವಾಳಿಯಾದ ಸಂದರ್ಭದಲ್ಲಿ ಠೇವಣಿದಾರರು ಡಿಐಸಿಜಿಸಿಯಿಂದ (DICGC) 5 ಲಕ್ಷ ರೂ.ವರೆಗೆ ಠೇವಣಿಯ ವಿಮೆ ಕ್ಲೈಮ್ ಮೊತ್ತ ಸ್ವೀಕರಿಸಲು ಅರ್ಹರಾಗಿದ್ದಾರೆ ಎಂದು ಆರ್ ಬಿಐ ತಿಳಿಸಿದೆ. ಬ್ಯಾಂಕಿನ ಠೇವಣಿದಾರರ ಮನವಿ ಮೇರೆಗೆ ಡಿಐಸಿಜಿಸಿ ಕಾಯ್ದೆ1961ರ ಸೆಕ್ಷನ್ 18ರಡಿಯಲ್ಲಿ 16.69 ಕೋಟಿ ರೂ. ಒಟ್ಟು ವಿಮಾ ಮೊತ್ತವನ್ನು ಪಾವತಿ ಮಾಡೋದಾಗಿ ಆರ್ ಬಿಐ (RBI) ಹೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

  ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್

ಹಿರಿಯೂರಿನಲ್ಲಿ ಅಧಿಕಾರಿಗಳ ಭರ್ಜರಿ ಬೇಟೆ | 5 ಕೆಜಿ ಚಿನ್ನ ವಶ

  ಸುದ್ದಿಒನ್, ಹಿರಿಯೂರು, ಮಾರ್ಚ್. 28  : ನಗರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5. 250 ಗ್ರಾಂ,‌(5 kg. 250 gms) 18 ಕ್ಯಾರೆಟ್ ಚಿನ್ನವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಿ.

error: Content is protected !!