Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮೆರಿಕದಲ್ಲಿ ಮತ್ತೊಮ್ಮೆ ಕೊರೊನಾ ಆತಂಕ, ಹೈ ಅಲರ್ಟ್ ಘೋಷಣೆ..!

Facebook
Twitter
Telegram
WhatsApp

ಕರೋನಾ ವೈರಸ್‌ನಿಂದ ಜನರು  ಚೇತರಿಸಿಕೊಳ್ಳುತ್ತಿರುವ ಕೆಲವು ದೇಶಗಳಲ್ಲಿ, ಎಚ್ಚರಿಕೆಯ ಗಂಟೆ ಮತ್ತೆ ಬಾರಿಸುತ್ತಿದೆ. ಇತ್ತೀಚಿನವರೆಗೂ, ಕರೋನದ ಹೊಸ ರೂಪಾಂತರಗಳು ಚೀನಾದಲ್ಲಿ ವಿಜೃಂಭಿಸುತ್ತಿದ್ದವು. ಉತ್ತರ ಕೊರಿಯಾ ಕೂಡ ಕರೋನಾದಿಂದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ಅಲ್ಲದೇ ಲಕ್ಷಾಂತರ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ.

ಇತ್ತೀಚೆಗಷ್ಟೇ ಅಮೆರಿಕ ಮತ್ತೊಮ್ಮೆ ಕೊರೊನಾ ವೈರಸ್‌ ಆತಂಕ ಎದುರಿಸುತ್ತಿದೆ. ನ್ಯೂಯಾರ್ಕ್ ನಗರದಲ್ಲಿ ಕೊರೊನಾ ಮಹಾಮಾರಿ ವೇಗವಾಗಿ ಹರಡುತ್ತಿದೆ. ನ್ಯೂಯಾರ್ಕ್ ಅಮೆರಿಕದ ಅತಿದೊಡ್ಡ ನಗರವಾಗಿರುವುದರಿಂದ ಜೋ ಬಿಡೆನ್ ಸರ್ಕಾರವು ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿದೆ. ನ್ಯೂಯಾರ್ಕ್ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಸೂಚಿಸಿದೆ.

ನ್ಯೂಯಾರ್ಕ್ ಸಿಟಿ ಹೆಲ್ತ್ ಕಮಿಷನರ್ ಡಾ.ಅಶ್ವಿನ್ ವಾಸನ್, ಹೈ ಅಲರ್ಟ್ ಜಾರಿ ಕುರಿತು ಮಾತನಾಡಿ, ಸ್ನೇಹಿತರು, ಸಂಬಂಧಿಕರು ಮತ್ತು ಸಹೋದ್ಯೋಗಿಗಳು ವೈರಸ್ ಸೋಂಕಿಗೆ ಒಳಗಾಗದಂತೆ ಎಚ್ಚರಿಕೆ ವಹಿಸಬೇಕು. ಏಳು ದಿನಗಳ ಸರಾಸರಿ ಪಾಸಿಟಿವಿಟಿ ದರವು 5.18 ಪ್ರತಿಶತಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್‌ನಿಂದ ಅಮೆರಿಕದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ಬಂದು

error: Content is protected !!